ಧಾರವಾಡ : ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹೊಸಪ್ರದೇಶ ವಿಸ್ತರಣೆಯಡಿ ಹಣ್ಣು (ಬಾಳೆ, ಪೇರಲ, ಮಾವು, ಹುಣಸಿ, ಪಪ್ಪಾಯಾ, ಚಿಕ್ಕು, ಸೀತಾಫಲ ಡ್ರ್ಯಾಗನ್), ಹೂ (ಗುಲಾಬಿ, ಸುಗಂಧರಾಜ, ಗ್ಲ್ಯಾಡಿಯೋಲಸ್, ಆಸ್ಟರ್, ಚೆಂಡು ಹೂ, ಸೇವಂತಿಗೆ), ತರಕಾರಿಗಳ ಪ್ರದೇಶ ವಿಸ್ತರಣೆ, ಗೋಡಂಬಿ ಪ್ರದೇಶ ವಿಸ್ತರಣೆ, ಮಾವು ಪನಶ್ಚೇತನ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ (ಹಸಿರುಮನೆ, ನೆರಳುಪರದೆ, ಪ್ಲಾಸ್ಟಿಕ ಮಲ್ಚಿಂಗ್), ಯಾಂತ್ರೀಕರಣ ಘಟಕದಡಿ 20 PTOHP ಸಾಮಥ್ರ್ಯದ ವರೆಗಿನ ಟ್ರ್ಯಾಕ್ಟರ್, ಸ್ಪ್ರೇಯರ್ ಹಾಗೂ ಪವರ್ ಟಿಲ್ಲರ್ ಕೊಯ್ಲೋತ್ತರ ನಿರ್ವಹಣೆ ಅಡಿ ಪ್ಯಾಕ್ಹೌಸ್, ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿ ಘಟಕಗಳ ರೈತರಿಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂನ್ 06, 2025 ರ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.