ಬಳ್ಳಾರಿ, ಮಾ.11: ನಗರದ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಯೋರ್ವ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿನ್ನೆ ಕಾಲೇಜಿನಲ್ಲಿ ಉಪನ್ಯಾಸಕರು ಬೈದಿರೋದು ಅತ್ಯಹತ್ಯೆಗೆ ಕಾರಣ ಎಂದು ಅರೋಪ ಕೇಳಿಬಂದಿದೆ
ನಗರದ ಗುಗ್ಗರಹಟ್ಟಿ ಪ್ರದೇಶದ ಅರವಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.
ನಿನ್ನೆ ದಿನ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಒಂದಷ್ಟು ಜಗಳವಾಗಿತ್ತು. ಆಗ ಆರವಿಂದ ಪೋಷಕರನ್ನು ಕಾಲೇಜಿನ ಉಪನ್ಯಾಸಕರು ಕರೆದು. ಹೀಗೆ ಗಲಾಟೆ ಮಾಡೋ ಹುಡುಗರನ್ನು ನಾವು ಕಾಲೇಜಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ. ಇದು ಲಾಸ್ಟ್ ವಾರ್ನಿಂಗ್ ಎಂದು ಹೇಳಿ ಕಳುಹಿಸಿದ್ದರು. ಇದರಿಂದ ಮನನೊಂದ ಅರವಿಂದ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂಬ ಆರೋಪವಾಗಿದೆ.
ಇಂದು ಬೆಳಿಗ್ಗೆ ಅರವಿಂದ ಸಾವಿನ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಶ್ರದ್ದಾಂಜಲಿ ಸಭೆ ನಡೆಸಲಾಯ್ತು. ನಂತರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅರವಿಂದ ಗೆ ಕಾಲೇಕಿನ ಹೆಚ್ಓಡಿ ಮತ್ತು ಉಪನ್ಯಾಸಕರು ಬೈದಿರೋದೇ ಕಾರಣ ಎಂದು ಆರೋಪಿಸಿ ಹೈಡ್ರಾಮ ನಡೆದು ಅರವಿಂದ ಸಾವಿನ ವಿಷಯದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು. ಕಾಲೇಜಿನ ಟೇಬಲ್, ಗ್ಲಾಸ್ ಒಡೆದು ಹಾಕಿ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಡಳಿತ ಮಂಡಳಿ ಬರಬೇಕು ನ್ಯಾಯ ಕೊಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸರು ಅಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.


