ದರೂರು ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ₹8 ಲಕ್ಷ ಮೌಲ್ಯದ ಶಿಲಾ ಬಂಡೆಗಳ ಆಗಮನ

Hasiru Kranti
ದರೂರು ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ₹8 ಲಕ್ಷ ಮೌಲ್ಯದ ಶಿಲಾ ಬಂಡೆಗಳ ಆಗಮನ
WhatsApp Group Join Now
Telegram Group Join Now
ಬಳ್ಳಾರಿ/ಸಿರುಗುಪ್ಪ, ಜ.09: ಸಿರುಗುಪ್ಪ ತಾಲ್ಲೂಕಿನ ದರೂರು ಗ್ರಾಮದ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರದಿಂದ ₹8,00,000 ಮೌಲ್ಯದ ಶಿಲಾ ಬಂಡೆಗಳು ಎರಡು ಲಾರಿಗಳ ಮೂಲಕ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಆಗಮಿಸಿವೆ.
ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಪ್ರಧಾನ ಆರ್ಚಕರು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಶಿಲಾ ಬಂಡೆಗಳಿಗೆ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, ನಂತರ ಪುಣ್ಯ ಕ್ಷೇತ್ರದ ಆವರಣದಲ್ಲಿ ಬಂಡೆಗಳನ್ನು ಇಳಿಸಲಾಯಿತು.
ಈಗಾಗಲೇ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರದಲ್ಲಿ ಸುಮಾರು ₹2 ಕೋಟಿ 50 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ₹4 ಕೋಟಿ ಮೌಲ್ಯದ ಕಾಮಗಾರಿಗಳು ಮುಂದುವರೆಯಬೇಕಾಗಿವೆ ಎಂದು ವ್ಯವಸ್ಥಾಪನ ಸಮಿತಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶದ ಕರ್ನೂಲ್ ಹಾಗೂ ಅನಂತಪುರ ಜಿಲ್ಲೆಗಳಲ್ಲಿರುವ ಭಕ್ತಾಧಿಗಳು ಪುಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಉದಾರವಾಗಿ ದೇಣಿಗೆ ನೀಡುವಂತೆ ಪುಣ್ಯ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮನವಿ ಮಾಡಿದೆ.
WhatsApp Group Join Now
Telegram Group Join Now
Share This Article