ಬಳ್ಳಾರಿ,ಜೂ.23
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ:
ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಹ ಅರ್ಜಿದಾರರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
2019-20 ಹಾಗೂ 2021-22ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಯೋಜನೆಗಳ ವಿವರ:
ಸ್ವಯಂ ಉದ್ಯೋಗ ಸಾಲ ಯೋಜನೆ, ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಸಿಇಟಿ ಹಾಗೂ ನೀಟ್ ಕೌನ್ಸಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು).
ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ http://kacdc.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಆರ್ಯವೈಶ್ಯ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 9448451111 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆರ್ಯವೈಶ್ಯ ಅಭಿವೃದ್ಧಿ ನಿಗಮ: ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
