ಪಶ್ಚಿಮ ಬಂಗಾಳ, ಆಗಸ್ಟ್ 19: ಪಶ್ಚಿಮ ಬಂಗಾಳದ ಪ್ರೌಢಶಾಲೆಯ ಹೊರಗೆ ಬ್ಯಾಗ್ ಸ್ಫೋಟಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಆ ಪ್ರದೇಶದಲ್ಲಿ ಭೀತಿ ಉಂಟಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಮೃತ ವ್ಯಕ್ತಿಯನ್ನು ಸಚ್ಚಿದಾನಂದ ಮಿಶ್ರಾ ಎಂದು ಗುರುತಿಸಲಾಗಿದ್ದು, ಅವರು ಉತ್ತರ ಪ್ರದೇಶದ ನಿವಾಸಿಯಾಗಿದ್ದಾರೆ.
ತೀವ್ರವಾಗಿ ಗಾಯಗೊಂಡ ಅವರನ್ನು ಮೊದಲು ಬರಾಸತ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ನಂತರ ಕೋಲ್ಕತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸೋಮವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಗೂ ಮೊದಲು ಮಿಶ್ರಾ ಜೊತೆ ಬೇರೆ ಯಾರಾದರೂ ಇದ್ದರಾ ಎಂದು ತಿಳಿಯಲು ಪೊಲೀಸರು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.