ಈ ಪೈಪೋಟಿಯಲ್ಲಿನ ಅತ್ಯುತ್ತಮ ಸಾಧನೆಯಾಗಿ ಬಳ್ಳಾರಿ ಬಿಸಿನೆಸ್ ಕಾಲೇಜಿನ (ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳು) ಬಿಸಿಎ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಬಿನ್
ವಿದ್ಯಾರ್ಥಿಗಳಈ ಯಶಸ್ಸು ಬಗ್ಗೆ ಮಾತನಾಡಿದ ಕಾಲೇಜಿನ ನಿರ್ದೇಶಕರು ಅಮರ್ ರಾಜ್ ಭೂಪಾಲ್ ರವರು,
“ಸಮರ್ಪಕ ತಯಾರಿ, ಪರಿಪೂರ್ಣತೆ ತಲುಪುವ ಸಂಕಲ್ಪ, ಅಸಾಧಾರಣ ಪರಿಶ್ರಮ, ನಿಷ್ಠೆ ಮತ್ತು ನಿರಂತರ ಅಭ್ಯಾಸ — ಈ ಎಲ್ಲವೂ ಒಟ್ಟಾಗಿ ವಿದ್ಯಾರ್ಥಿಗಳನ್ನು ಜಯಶೀಲರನ್ನಾಗಿ ಮಾಡಿವೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ನೂತನ ಚಿಂತನೆ, ನಾಯಕತ್ವ ಮತ್ತು ತಂಡಭಾವವನ್ನು ಬೆಳೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲರು, ಬಿಸಿಎ ವಿಭಾಗದ ಮುಖ್ಯಸ್ಥರು ಹಾಗೂ ಅಧ್ಯಾಪಕರು ಒಗ್ಗಟ್ಟಿನಿಂದ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಭವಿಷ್ಯದಲ್ಲೂ ಇನ್ನಷ್ಟು ರಾಷ್ಟ್ರಮಟ್ಟದ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಭಾಗವಹಿಸಿ ಕಾಲೇಜು ಮತ್ತು ಸಂಸ್ಥೆಯ ಹೆಸರನ್ನು ಎತ್ತಿ ಹಿಡಿಯುವಂತೆ ಶುಭಾಶಯಗಳನ್ನು ತಿಳಿಸಿದರು.
ಈ ಸಾಧನೆ ಬಳ್ಳಾರಿ ಬಿಸಿನೆಸ್ ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ವಿದ್ಯಾರ್ಥಿಗಳ ತಾಂತ್ರಿಕ ಸಾಮರ್ಥ್ಯ ಮತ್ತು ಶಿಕ್ಷಣ ಸಂಸ್ಥೆಯ ಮಾರ್ಗದರ್ಶನದ ಪರಿಣಾಮಕಾರಿತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.


