ಬಳ್ಳಾರಿ,ಮಾ.11
ಜಿಲ್ಲೆಯಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ನಾಗರಿಕ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ‘ಕಂಟ್ರೋಲ್ ರೂಂ’ (ನಿಯಂತ್ರಣ ಕೊಠಡಿ) ಅನ್ನು ತೆರೆಯಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ, ಅವುಗಳನ್ನು ಸಂಬAಧಪಟ್ಟ ಇಲಾಖೆಗಳಿಗೆ ತಕ್ಷಣವೇ ರವಾನಿಸಿ ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ.
*ಸAಪರ್ಕಿಸಬೇಕಾದ ಸಂಖ್ಯೆಗಳು:*
ದೂರವಾಣಿ ಸಂಖ್ಯೆ (ಟೋಲ್ ಫ್ರೀ ಸಂಖ್ಯೆ)-1077
ಲ್ಯಾAಡ್ ಲೈನ್ ಸಂಖ್ಯೆ-08392-277100
ವಾಟ್ಸಾಪ್ ಸಂಖ್ಯೆ-8277888866
ಜಿಲ್ಲೆಯ ನಾಗರಿಕರು ತಮ್ಮ ಭಾಗದ ಕುಡಿಯುವ ನೀರಿನ ಸಮಸ್ಯೆ ಅಥವಾ ಇತರೆ ಯಾವುದೇ ಸಾರ್ವಜನಿಕ ದೂರುಗಳಿದ್ದಲ್ಲಿ ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ತಮ್ಮ ದೂರು-ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ಕುಡಿಯುವ ನೀರು ಹಾಗೂ ಸಾರ್ವಜನಿಕ ಕುಂದುಕೊರತೆಗಳ ನಿವಾರಣೆಗೆ ‘ಕಂಟ್ರೋಲ್ ರೂಂ’ ಆರಂಭ


