ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

Ravi Talawar
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​.19: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಇದೇ ಬ್ರಹ್ಮಾಸ್ತ್ರವನ್ನ ಬಳಸಿಕೊಂಡು ಹೋರಾಟಕ್ಕಿಳಿದಿರೋ ದೋಸ್ತಿಗಳು ಇವತ್ತು ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಪ್ರತಿಭಟನೆ ಮಾಡಿದ್ರು. ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್‌ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ರು.

WhatsApp Group Join Now
Telegram Group Join Now
Share This Article