ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ

Ravi Talawar
ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ
WhatsApp Group Join Now
Telegram Group Join Now

ಗ್ವಾಲಿಯರ್: ಹಿಂಡೆನ್‌ಬರ್ಗ್ ವರದಿ ಕುರಿತು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್‌ಗೆ ಒಂದೇ ಒಂದು ಕೆಲಸ. ಅದೇನೆಂದರೆ ದೇಶದಲ್ಲಿ ಅರಾಜಕತೆಯನ್ನು ಹರಡಲು ಮತ್ತು ದೇಶವನ್ನು ವಿವಾದಾತ್ಮಕ ವಿಷಯಗಳಲ್ಲಿ ತೊಡಗಿಸುವುದಾಗಿದೆ. ಪಿಎಂ ನರೇಂದ್ರ ಮೋದಿ ಮತ್ತು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಭಾರತವು ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ” ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಗುಣಾದಲ್ಲಿ ತಮ್ಮ ಮೂರು ದಿನಗಳ ಪ್ರವಾಸವನ್ನು ಇಂದು ಪ್ರಾರಂಭಿಸಿದರು. ಕೇಂದ್ರ ಸಚಿವರು ತಮ್ಮ ಲೋಕಸಭಾ ಕ್ಷೇತ್ರದ ಮೂರು ಜಿಲ್ಲೆಗಳಲ್ಲಿ ಸಾರ್ವಜನಿಕ ಸಂಪರ್ಕ ಕಚೇರಿಗಳನ್ನು ತೆರೆಯುವ ಬಗ್ಗೆ ಮತ್ತು ಶೀಘ್ರದಲ್ಲೇ ಗ್ವಾಲಿಯರ್‌ನಲ್ಲಿ ಉದ್ಯಮಶೀಲತಾ ಕೇಂದ್ರವನ್ನು ತೆರೆಯುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

WhatsApp Group Join Now
Telegram Group Join Now
Share This Article