ಬೆಳಗಾವಿ.ರಾಜ್ಯ ಹಾಗೂ ಜಿಲ್ಲೆಯಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಹೊರಹಾಕಲು ಹಿಂಜರಿಯುತ್ತಿರುವ ರಾಜ್ಯ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಯಿತು.ಈ ಮೂಲಕ ಜಿಲ್ಲಾಧಿಕಾರಿ ಮೊಹಮ್ಮದ ರೋಷನ ಅವರಿಗೆ ಮನವಿ ಸಲ್ಲಿಸಲಾಯಿತು.
ಮಂಗಳವಾರದಂದು ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ದೇಶದ ಹಿಂದುಗಳನ್ನು ಹತ್ಯೆ ಮಾಡಿರುವ ಪಾಕಿಸ್ತಾನ ಉಗ್ರಗಾಮಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕೊಡಲು ಪ್ರಧಾನಿ ಮೋಧೀಜಿ ಕೆಲಸ ಮಾಡುತ್ತಿದ್ದು ಅವರಿಗೆ ರಾಜ್ಯದಲ್ಲಿ ಇರುವ ಪಾಕಿಸ್ತಾನ ಜನರನ್ನು ಅವರ ದೇಶಕ್ಕೆ ಕಲಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಶುಭಾಶ ಪಾಟೀಲ ಹಾಗೂ ಮಹಾನಗರ ಮಹಿಳಾ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ ಹೇಳಿದರು.
ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಮಾತನಾಡಿ ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಇರುವ ಪಾಕಿಸ್ತಾನದ ಪ್ರಜೆಗಳನ್ನು ಅವರ ದೇಶಕ್ಕೆ ಕಳುಹಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಕಾರ್ಯ ಸಿ ಎಮ್ ಸಿದ್ರಾಮಯ್ಯ ಮಾಡುತ್ತಿಲ್ಲ ಎಂದರು. ಮಾಜಿ ಶಾಸಕ ಸಂಜಯ್ ಪಾಟೀಲ ಮಾತನಾಡಿ ಶೀಘ್ರದಲ್ಲಿ ರಾಜ್ಯದಲ್ಲಿ ಇರುವ ಪಾಕಿಸ್ತಾನ ಪ್ರಜೆಗಳನ್ನು ಹೊರಗೆ ಕಲಿಸಲು ರಾಜ್ಯ ಸರ್ಕಾರ ಕ್ರಮ ತಗೆದುಕೊಳ್ಳಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂಎಲ್ ಮುತ್ತೆನ್ನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ರಾಜಶೇಖರ್ ದೋಣಿ ಈರಯ್ಯ ಖೋತ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ,ಜಿಲ್ಲಾ ಉಪಾಧ್ಯಕ್ಷ ಮಾರುತಿ ಕೊಪ್ಪದ,ವಿನಯ್ ಕದಂ,ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಹಾನಗರ ಪಾಲಿಕೆ ಸದಸ್ಯರಾದ ಹನುಮಂತ ಕೊಂಗಾಲಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಯನಾ ಬಸ್ಮೆ, ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ,ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ್ ಕೊಲಕಾರ, ಮುಖಂಡರಾದ ಮುರುಗೇಂದ್ರಗೌಡ ಪಾಟೀಲ, ಚೇತನ್ ಅಂಗಡಿ,ಸಿ.ಬಿ ಪಾಟೀಲ,ಮಂಡಲ ಅಧ್ಯಕ್ಷರುಗಳಾದ ಬಸವರಾಜ ಸಾಣಿಕೋಪ್ಪ,ಕೆ.ವಿ ಪಾಟೀಲ, ಮಹಾದೇವ ಶೆಕ್ಕಿ, ಬಸವರಾಜ ಬಂಡಿವಡ್ಡರ, ಮನೋಜ್ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ವಿಠ್ಠಲ ಸಾಯಣ್ಣವರ, ವೀರಭದ್ರ ಪೂಜಾರಿ, ಮಹಾಂತೇಶ ಕುಡಚಿ ಹಾಗೂ ಪ್ರಮುಖ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು