ರಾಹುಲ್​ ಗಾಂಧಿ ದೇಶದ ಹಿಂದೂಗಳಿಗೆ ಅವಮಾನ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Ravi Talawar
ರಾಹುಲ್​ ಗಾಂಧಿ ದೇಶದ ಹಿಂದೂಗಳಿಗೆ ಅವಮಾನ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
WhatsApp Group Join Now
Telegram Group Join Now

ಬೆಂಗಳೂರು: ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಾ ಹಿಂದೂಗಳು ಹಿಂಸಾಚಾರ ಹಾಗು ದ್ವೇಷದಲ್ಲಿ ನಿರತರಾಗಿದ್ದಾರೆ ಎಂದಿದ್ದಾರೆ. ಇದರೊಂದಿಗೆ ದೇಶದ ಅಸಂಖ್ಯಾತ ಹಿಂದೂಗಳಿಗೆ ಅವಮಾನ ಮಾಡಿದ್ದು, ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿನ್ನೆ ಚೊಚ್ಚಲ ಬಾರಿಗೆ ಪ್ರತಿಪಕ್ಷ ನಾಯಕನಾಗಿ ರಾಹುಲ್​ ಗಾಂಧಿ ಮಾಡಿರುವ ಭಾಷಣ ಸುಳ್ಳು, ನಿರಾಶೆ ಹಾಗೂ ಆಧಾರರಹಿತ ಆರೋಪಗಳಿಂದ ಕೂಡಿತ್ತು. ತಮ್ಮ ಭಾಷಣದ ಮೂಲಕ ಸಂಸತ್ತಿನ ಘನತೆಗೆ ಧಕ್ಕೆ ತಂದಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಸುಳ್ಳನ್ನೇ ಹತ್ತಾರು ಬಾರಿ ಹೇಳಿಕೊಂಡು ತಿರುಗಾಡಿ ಈಗ ಪ್ರತಿಪಪಕ್ಷ ನಾಯಕರಾಗಿ ಅದೇ ಚಾಳಿ ಮುಂದುವರೆಸಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನದ ಘನತೆಗೂ ಧಕ್ಕೆ ತಂದಿದ್ದಾರೆ ಎಂದು ಟೀಕಿಸಿದರು.

ಅಗ್ನಿವೀರ್, ರೈತರು, ಅಯೋಧ್ಯೆ, ಮೈಕ್ರೋಫೋನ್ ವಿಚಾರದಲ್ಲಿಯೂ ರಾಹುಲ್ ಗಾಂಧಿ ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಅನೇಕ ವಿಚಾರಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಆಗ್ರಹಿಸಿದರು.

WhatsApp Group Join Now
Telegram Group Join Now
Share This Article