ಬೆಂಗಳೂರು (ನ.29): ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ, ಡಿಸಿಎಂ ಕುರ್ಚಿ ಕಾದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಕರ್ನಾಟಕದ ರಿಪೋರ್ಟ್ ಕಾರ್ಡ್ ಹಿಡಿದು ದೆಹಲಿಗೆ ತೆರಳಿದ ಎಐಸಿಸಿ ಅಧ್ಯಕ್ಷರು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುತ್ತಿದೆ. ಶನಿವಾರ ಮಹತ್ವದ ಸಭೆ ನಡೆಯಲಿದ್ದು, ಪವರ್ ಶೇರಿಂಗ್ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆ ಇದೆ. ಇತ್ತ ಕಾಂಗ್ರೆಸ್ ನಾಯಕರು ಆಪ್ತರ ಜೊತೆ ಸಭೆ ಕರೆದು ಗುಸು-ಗುಸು, ಪಿಸು-ಪಿಸು ಅಂತ ಚರ್ಚೆಗಿಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಮಾತಾಡಿದ ಬಿಕೆ ಹರಿಪ್ರಸಾದ್ ಅವರು 140 ಶಾಸಕರಿಂದ ಮಾತ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ ಎಂದಿದ್ದಾರೆ.
ಮುನಿಯಪ್ಪ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್: ನಿಯಪ್ಪ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದ್ದು,ಬಿ.ಕೆ. ಹರಿಪ್ರಸಾದ್ , ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ ಉಪಸ್ಥಿತರಿದ್ರು. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಬಿಕೆ ಹರಿಪ್ರಸಾದ್ ಎಲ್ರೂ ಹಳೆಯ ಸ್ನೇಹಿತರು. ಈಗ ಭೇಟಿಯಾಗಿ ಮಾತಾಡಿದ್ದೇವೆ ಎಂದಿದ್ದಾರೆ.

