ಬಿಷ್ಣೋಯ್​ ಗ್ಯಾಂಗ್​​ನಿಂದ ಖಲಿಸ್ತಾನಿಗಳ ಹತ್ಯೆಗೆ ಭಾರತ ಸಂಚು: ಕೆನಡಾ ಆರೋಪ

Ravi Talawar
ಬಿಷ್ಣೋಯ್​ ಗ್ಯಾಂಗ್​​ನಿಂದ ಖಲಿಸ್ತಾನಿಗಳ ಹತ್ಯೆಗೆ ಭಾರತ ಸಂಚು: ಕೆನಡಾ ಆರೋಪ
WhatsApp Group Join Now
Telegram Group Join Now

ಒಟ್ಟಾವ, ಕೆನಡಾ: ಉಗ್ರ ನಿಜ್ಜರ್​​ ಹತ್ಯೆ ವಿಚಾರದಲ್ಲಿ ಕೆನಡಾ ಮತ್ತು ಭಾರತದ ರಾಜತಾಂತ್ರಿಕ ಸಂಬಂಧಗಳು ಮುರಿದುಬಿದ್ದಿವೆ. ಇದರ ಬೆನ್ನಲ್ಲೇ, ಕೆನಡಾ ಭಾರತದ ಮೇಲೆ ಮತ್ತೊಂದು ಗುರುತರ ಆರೋಪ ಮಾಡಿದೆ. ‘ಖಲಿಸ್ತಾನಿಗಳ ವಿರುದ್ಧ ಬಿಷ್ಣೋಯ್​ ಲಾರೆನ್ಸ್ ಗ್ಯಾಂಗ್​​ ಅನ್ನು ಭಾರತ ಸರ್ಕಾರ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದೆ.

ಕೆನಡಾದ ರಾಷ್ಟ್ರೀಯ ಭದ್ರತೆಯ ಸಹಾಯಕ ಕಮಿಷನರ್ ಬ್ರಿಗಿಟ್ಟೆ ಗೌವಿನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಾರತದ ಏಜೆಂಟರು ಖಲಿಸ್ತಾನಿ ಪರ ವ್ಯಕ್ತಿಗಳನ್ನು ಗುರಿಯಾಗಿಸಲು ಬಿಷ್ಣೋಯ್​​ ಲಾರೆನ್ಸ್ ಗ್ಯಾಂಗ್​ ಅನ್ನು ಬಳಸುತ್ತಿದ್ದಾರೆ. ಅವರ ಮೂಲಕ ನಿಜ್ಜರ್​ ಹತ್ಯೆ ಮಾಡಿಸಲಾಗಿದೆ ಎಂದು ದೂರಿದ್ದಾರೆ.

ದಕ್ಷಿಣ ಏಷ್ಯಾದ ಜನರನ್ನು, ಅದರಲ್ಲೂ ವಿಶೇಷವಾಗಿ ಖಲಿಸ್ತಾನಿ ಹೋರಾಟಗಾರರನ್ನು ಟಾರ್ಗೆಟ್​ ಮಾಡಲಾಗಿದೆ. ತನಿಖೆ ಮತ್ತು ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಷ್ಣೋಯ್​ ಗ್ಯಾಂಗ್​​ನ ಸಂಘಟಿತ ಅಪರಾಧದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.

ಬಿಷ್ಣೋಯ್​ ಗ್ಯಾಂಗ್​ ಭಾರತ ಸರ್ಕಾರದ ಏಜೆಂಟರೊಂದಿಗೆ ಸಂಪರ್ಕ ಹೊಂದಿದೆ. ಸರ್ಕಾರವೇ ಇದರಲ್ಲಿ ಭಾಗಿಯಾದ ಬಗ್ಗೆ ತಮ್ಮ ಬಳಿ ಮಾಹಿತಿ ಇದೆ ಎಂದು ಅಧಿಕಾರಿ ಆರೋಪಿಸಿದರು.

 

WhatsApp Group Join Now
Telegram Group Join Now
Share This Article