ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ

Ravi Talawar
ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ
WhatsApp Group Join Now
Telegram Group Join Now

ಬೆಂಗಳೂರು: ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ನಟೋರಿಯಸ್ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸುನೀಲ ಸೇರಿದಂತೆ ಹಲವು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿದ್ದು, ಜೈಲಿನಲ್ಲಿ ಕೂತು ಹೊರಗಡೆ ಇರುವ ಸಹಚರರ ಮೂಲಕ ಅಪರಾಧ ಚಟುವಟಿಕೆಗಳನ್ನ ನಿಯಂತ್ರಿಸುತ್ತಿದ್ದಾರೆ ಎಂಬ‌ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಗ್ಗೆಯೇ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದು, ಬ್ಯಾರಕ್‌ನಲ್ಲಿ ಮೊಬೈಲ್, ಶಸ್ತ್ರಾಸ್ತ್ರ ಸೇರಿದಂತೆ ಹಲವು ವಸ್ತುಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಕಾರಾಗೃಹದಲ್ಲಿರುವ ಕೆಲವು ಅಪರಾಧಿಗಳನ್ನ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವ ಪ್ರಸ್ತಾಪ ಸಹ ಇದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
Share This Article