ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ

Ravi Talawar
ದಾಳಿಗೂ ಮುನ್ನ ಪರಪ್ಪನ ಅಗ್ರಹಾರದ ಮುಂದೆ ಅರ್ಧಗಂಟೆ ಕಾಯ್ದಿದ್ದ ಸಿಸಿಬಿ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್​​ 27: ನಾಲ್ಕು ದಿನಗಳ ಹಿಂದೆ ಶನಿವಾರ (ಆ.​ 24) ರಂದು ಸಿಸಿಬಿ (CCB) ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ  ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು. ಈ ಫೋಟೋ ವೈರಲ್​ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳ ದಾಳಿ ಮಾಹಿತಿ ಸೋರಿಕೆಯಾಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಶನಿವಾರ ಸಿಸಿಬಿ ಅಧಿಕಾರಿಗಳು ಜೈಲಿನೊಳಗೆ ಪ್ರವೇಶಿಸುವ ಮುನ್ನ ಅರ್ಧಗಂಟೆ ಹೊರಗಡೆ ಕಾಯ್ದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸಿಸಿಬಿ ಅಧಿಕಾರಿಗಳು ದಾಳಿಗೆ ಬಂದಿದ್ದಾಗ ಜೈಲಧಿಕಾರಿಗಳು ಅರ್ಧ ಗಂಟೆ ಒಳಗೆ ಬಿಡಲಿಲ್ಲ. ಈ ವೇಳೆ ಸಿಸಿಬಿ ಅಧಿಕಾರಿಗಳು ಏಕೆ ಕಾಯಬೇಕು ಎಂದು ಜೈಲು ಸಿಬ್ಬಂದಿಗೆ ಪ್ರಶ್ನೆ ಮಾಡಿದ್ದಾರೆ. ಜೈಲು ಅಧೀಕ್ಷಕ ಬಂದಿಲ್ಲ, ಅವರಿಲ್ಲದೆ ಒಳಗೆ ಬಿಡಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ, ಸಿಸಿಬಿ ಅಧಿಕಾರಿಗಳು ಸುಮಾರು ಅರ್ಧಗಂಟೆ ಜೈಲಿನ ಬಾಗಿಲಿನಲ್ಲೇ ಕಾಯ್ದಿದ್ದಾರೆ.

WhatsApp Group Join Now
Telegram Group Join Now
Share This Article