ಅಮರಾವತಿ  ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

Ravi Talawar
ಅಮರಾವತಿ  ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು
WhatsApp Group Join Now
Telegram Group Join Now

ವಿಜಯವಾಡ ಜೂನ್ 11: ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು  ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ  ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ. ಟಿಡಿಪಿ-ಜೆಎಸ್‌ಪಿ-ಬಿಜೆಪಿ ಶಾಸಕರು ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ಸಭೆ ನಡೆಸಿ ಚಂದ್ರಬಾಬು ನಾಯ್ಡು ಅವರನ್ನು ಸಿಎಂ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಅಟ್ಚನ್ ನಾಯ್ಡು ಅವರು ಚಂದ್ರಬಾಬು ನಾಯ್ಡು ಅವರನ್ನು ಟಿಡಿಎಲ್‌ಪಿ ನಾಯಕರಾಗಿ ಆಯ್ಕೆ ಮಾಡಿದ್ದಾರೆ ಎಂದು ಘೋಷಿಸಿದರು.

ಆಯ್ಕೆಯಾದ ನಂತರ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾತನಾಡಿದ ನಾಯ್ಡು, ಜನರು ನೀಡಿದ ತೀರ್ಪನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ. 3 ಪಕ್ಷಗಳ ಮುಖಂಡರು, ಕಾರ್ಯಕರ್ತರು ನೂರಕ್ಕೆ ನೂರು ಪ್ರತಿಶತ ಒಗ್ಗಟ್ಟಾಗಿ ಕೆಲಸ ಮಾಡಿದರು. ಚುನಾವಣೆಯಲ್ಲಿ ಶೇ.93ರಷ್ಟು ಸ್ಥಾನಗಳನ್ನು ಗೆಲ್ಲುವುದು ದೇಶದ ಇತಿಹಾಸದಲ್ಲೇ ಅಪರೂಪ. ಚುನಾವಣೆಯಲ್ಲಿ ಜನರು 57 ರಷ್ಟು ಮತಗಳನ್ನು ಪಡೆದು ಆಶೀರ್ವದಿಸಿದ್ದಾರೆ. ನಾವೆಲ್ಲರೂ ಹೆಚ್ಚು ಜವಾಬ್ದಾರಿಯುತರಾಗಬೇಕು ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article