ಮದುವೆಗೆ ನಿರಾಕರಿಸಿದಕ್ಕೆ ನೇಹಾಳ ಕೊಲೆ: ಸ್ಪಷ್ಟಪಡಿಸಿದ ಸಿಐಡಿ

Ravi Talawar
ಮದುವೆಗೆ ನಿರಾಕರಿಸಿದಕ್ಕೆ ನೇಹಾಳ ಕೊಲೆ:  ಸ್ಪಷ್ಟಪಡಿಸಿದ ಸಿಐಡಿ
WhatsApp Group Join Now
Telegram Group Join Now

ಹುಬ್ಬಳ್ಳಿ, ಜುಲೈ 10: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ  ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ ಜಿಹಾದ್​ ಇದೆ ಅಂತ ನೇಹಾ ತಂದೆ ನಿರಂಜನ ಹಿರೇಮಠ, ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ಮಾಡಿದ್ದವು.

ಪ್ರಕರಣದ ತನಿಖೆ ನಡೆಸಿದ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ. ಮದುವೆಗೆ ನಿರಾಕರಿಸಿದಕ್ಕೆ ನೇಹಾಳನ್ನು ಫಯಾಜ್​ ಕೊಲೆ ಮಾಡಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.​

ಕೊಲೆಯಾದ 81 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು 483 ಪುಟಗಳ ಚಾರ್ಜ್​ ಶೀಟ್​ ಸಲ್ಲಿಸಿದ್ದಾರೆ. ಚಾರ್ಜ್​​ ಶೀಟ್​ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್​ ಹುಬ್ಬಳ್ಳಿಯ ಪಿಸಿ ಜಾಬಿನ್​ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. ನಂತರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್​ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಮನಸ್ತಾಪ ಉಂಟಾಯಿತು. ಬಳಿಕ ನೇಹಾ ಆರೋಪಿ ಫಯಾಜ್​ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

 

WhatsApp Group Join Now
Telegram Group Join Now
Share This Article