ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್‌ ನರ್ಧಾರ: ಪರಮೇಶ್ವರ್‌

Ravi Talawar
ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್‌ ನರ್ಧಾರ: ಪರಮೇಶ್ವರ್‌
WhatsApp Group Join Now
Telegram Group Join Now

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಈಗಲೂ ಶಾಸಕರ ಅಭಿಪ್ರಾಯ ಪಡೆಯಬಹುದು. ಶಾಸಕರ ಅಭಿಪ್ರಾಯ ಬೇಡ ಅಂತಲೂ ಹೈಕಮಾಂಡ್ ತೀರ್ಮಾನಿಸಬಹುದು ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿನನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಹೈಕಮಾಂಡ್ ಆಯ್ಕೆ ಹೊರತು ಶಾಸಕರ ಆಯ್ಕೆಯಲ್ಲ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಶಾಸಕರ ಬಲವೇ ಮುಖ್ಯ. ಪಕ್ಷ ಗೆದ್ದ ಮೇಲೆ ಸಿಎಂ ಆಯ್ಕೆ ಆಗುತ್ತದೆ. ಶಾಸಕರ ಅಭಿಪ್ರಾಯ ಪಡೆದು ಮಾಡ್ತಾರೆ. ಹೈಕಮಾಂಡ್ ಅಬ್ಸರ್ವರ್ಸ್ ಕಳಿಸುತ್ತದೆ. ಅವರು ಶಾಸಕರ ಅಭಿಪ್ರಾಯ ಕೇಳ್ತಾರೆ. ಇಷ್ಟು ಜನ ಈ ರೀತಿ ಹೇಳಿದ್ದಾರೆ, ಉಳಿದವರು ಈ ರೀತಿ ಹೇಳಿದ್ದಾರೆ ಅಂತ ಹೇಳ್ತಾರೆ. ಮೊದಲ ಬಾರಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದ್ದು ಹೀಗೆ. ಈಗಲೂ ಶಾಸಕರ ಅಭಿಪ್ರಾಯ ಪಡೆಯಬಹುದು. ಶಾಸಕ ಅಭಿಪ್ರಾಯ ಬೇಡ ಅಂತ ಹೈಕಮಾಂಡ್ ತೀರ್ಮಾನಿಸಬಹುದು ಎಂದು ಸೂಚ್ಯವಾಗಿ ಪ್ರತಿಕ್ರಿಯೆ ನೀಡಿದರು.

WhatsApp Group Join Now
Telegram Group Join Now
Share This Article