ನಾಯಕ ಸಮುದಾಯಕ್ಕೂ ಸಚಿವ ಸ್ಥಾನ: ಸಿಎಂ ಭರವಸೆ

Ravi Talawar
ನಾಯಕ ಸಮುದಾಯಕ್ಕೂ ಸಚಿವ ಸ್ಥಾನ: ಸಿಎಂ ಭರವಸೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 07: ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮಹರ್ಷಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ  ಮಾಲಾರ್ಪಣೆ ಮಾಡಿದ್ದಾರೆ. ನಾಯಕ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಬೇಡಿಕೆ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮುಂದೆ ಸಚಿವ ಸಂಪುಟ ಪುನಾರಚನೆ ವೇಳೆ ಅವರಿಗೂ ಸಚಿವ ಸ್ಥಾನ ಕೊಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಸಿಎಸ್​ ಶಾಲಿನಿ ರಜನೀಶ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article