ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು

Ravi Talawar
ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು
WhatsApp Group Join Now
Telegram Group Join Now

ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್​ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್​ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಜೊತೆಗೆ ಸರ್ಚ್ ವಾರಂಟ್ ನೀಡಿ ವಾಪಸ್​ ಪಡೆಯಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಲೋಕಾಯುಕ್ತ ಹಿರಿಯ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಧಿಕಾರಿ ಮಾರುತಿ ಬಗಲಿ, ಹಿಂದಿನ ಮುಡಾ ಆಯುಕ್ತರಾದ ನಟೇಶ್, ದಿನೇಶ್ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್ ಹಾಗೂ ಅಂಚೆ ಪತ್ರದ ಮೂಲಕ ದೂರು ಸಲ್ಲಿಕೆ ಮಾಡಲಾಗಿದೆ.

ಮುಡಾ ಹಗರಣ ಕುರಿತು ಲೋಕಾಯುಕ್ತ ದಾಖಲೆ ಸಂಗ್ರಹ ಮಾಡಿತ್ತು. ತನಿಖಾಧಿಕಾರಿಗಳು 1 ಸಾವಿರ ಪುಟಗಳ ದಾಖಲೆ ಸಂಗ್ರಹ ಮಾಡಿದ್ದರು. ಲೋಕಾಯುಕ್ತ ಇನ್ಸ್​ಪೆಕ್ಟರ್ ರವಿಕುಮಾರ್ ತಂಡ ಸಾಕ್ಷಿ ಸಂಗ್ರಹಿಸಿತ್ತು. ಬಳಿಕ ಸರ್ಚ್ ವಾರಂಟ್ ನೀಡಲು ಅಂದಿನ ಎಸ್​ಪಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಈ ಮೂಲಕ ಭೈರತಿ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಗಂಗರಾಜು ಉಲ್ಲೇಖಿಸಿದ್ದಾರೆ.

WhatsApp Group Join Now
Telegram Group Join Now
Share This Article