ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ ದೂರು

Ravi Talawar
ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ನಾಯಕ ಎಂ. ಲಕ್ಷ್ಮಣ ದೂರು
WhatsApp Group Join Now
Telegram Group Join Now

ಮೈಸೂರು, ಆಗಸ್ಟ್​ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ಪಾತ್ರವೂ ಇದೆ ಅಂತ​ ರಾಜ್ಯಪಾಲರಿಗೆ ವಿರುದ್ಧ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್​ ನಾಯಕ ಎಂ.ಲಕ್ಷ್ಮಣ  ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು 2022-2023ನೇ ಸಾಲಿನಲ್ಲಿ ಒಟ್ಟು 110 ಅರ್ಜಿಗಳನ್ನು RTI ಮೂಲಕ ವಿವಿಧ ಇಲಾಖೆಗಳಿಗೆ ನೀಡಿ ದಾಖಲಾತಿಗಳನ್ನು ಪಡೆದು ಕೊಂಡಿದ್ದಾರೆ ಎಂದು ಪೊಲೀಸ್ ವರದಿ ಹೇಳುತ್ತಿದೆ. ಕೆಲ ಇಲಾಖೆಗಳ ನಕಲಿ ಸೀಲ್​ಗಳನ್ನು ಇಟ್ಟುಕೊಂಡು ಹಾಗೂ RTI ಮಾಹಿತಿ ಸೀಲ್‌ಗಳನ್ನು ನಕಲಿಯಾಗಿ ಮಾಡಿಸಿಕೊಂಡು ದಾಖಲೆಗಳನ್ನು ತಿರುಚಿ ಮತ್ತು ಕೆಲ ಅಕ್ಷರಗಳಿಗೆ whitenerನ್ನು ಹಚ್ಚಿರುವುದು ಕಂಡು ಬಂದಿದೆ.

WhatsApp Group Join Now
Telegram Group Join Now
Share This Article