ಕಾಂಗ್ರೆಸ್​ ಸರ್ಕಾರ ದುರ್ಬಲಗೊಳಿಸುವ ಯತ್ನ: ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Ravi Talawar
ಕಾಂಗ್ರೆಸ್​ ಸರ್ಕಾರ ದುರ್ಬಲಗೊಳಿಸುವ ಯತ್ನ: ಕೇಂದ್ರ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು, ಜುಲೈ. 23: ಕರ್ನಾಟಕದಲ್ಲಿ ಕಾಂಗ್ರೆಸ್​ ಸರ್ಕಾರ ದುರ್ಬಲಗೊಳಿಸುವ ಯತ್ನ ನಡೆದಿದೆ. ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ. ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ  ಹಾಘೂ ಡಿಸಿಎಂ ಡಿಕೆ ಶಿವಕುಮಾರ್  ಅವರು ಇಡಿ  ತನಿಖಾ ಸಂಸ್ಥೆ ಹಾಗೂ ಕೇಂದ್ರ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ, ಡಿಸಿಎಂ ಹಾಘೂ ಮಾಜಿ ಸಚಿವ ಬಿ. ನಾಗೇಂದ್ರ ಹೆಸರೇಳುವಂತೆ ಕಿರುಕುಳ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಸಚಿವರಾದ ಡಾ.ಜಿ.ಪರಮೇಶ್ವರ್​, ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಹೆಚ್​.ಕೆ.ಪಾಟೀಲ್, ಭೈರತಿ ಸುರೇಶ್​, ಲಾಡ್, ಕೆ.ಎನ್​.ರಾಜಣ್ಣ, ಕೃಷ್ಣಭೈರೇಗೌಡ, ಎಂ.ಬಿ.ಪಾಟೀಲ್​, ವೆಂಕಟೇಶ್​, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್​, ಎಂ.ಸಿ.ಸುಧಾಕರ್, ಶರಣಪ್ರಕಾಶ್​ ಪಾಟೀಲ್ ಸೇರಿ ಹಲವರು ಭಾಗಿಯಾಗಿದ್ದಾರೆ. ಇಡಿ ಅಧಿಕಾರಿಗಳ ನಡೆ ಖಂಡಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್​ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

 

WhatsApp Group Join Now
Telegram Group Join Now
Share This Article