ಬೆಂಗಳೂರು, ಆಗಸ್ಟ್ 08: ಮತಗಳ್ಳತನ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ (congress) ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲೇ ಏರ್ಪಟ್ಟಿದೆ. ಇತ್ತ ಚುನಾವಣೆ ಮುಖ್ಯ ಕಚೇರಿಗೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, 6 ನಾಯಕರಿಗಷ್ಟೇ ಅನುಮತಿ ನೀಡಲಾಗಿದೆ.
ಇನ್ನು ದೂರು ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ ಕಾಪಿಗೆ ಸಹಿ ಹಾಕುತ್ತಾರಾ ಅಥವಾ ಇಲ್ಲವಾ ಎಂಬ ಕುತೂಹಲ ಸೃಷ್ಟಿಯಾಗಿದೆ. ಏಕೆಂದರೆ ಡಿಕ್ಲರೇಶನ್ಗೆ ಸಹಿ ಹಾಕುವಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಡಿಕ್ಲರೇಶನ್ ಮಾದರಿಯನ್ನು ಚುನಾವಣಾ ಆಯೋಗ ತಾವೇ ಸ್ವತಃ ರಾಹುಲ್ ಗಾಂಧಿಗೆ ರವಾನಿಸಿದ್ದು, ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಒಂದು ವೇಳೆ ರಾಹುಲ್ ಗಾಂಧಿ ಡಿಕ್ಲರೇಶನ್ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಗಳು ಎದುರಿಸಬೇಕಾಗಬಹುದು.