ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ

Ravi Talawar
ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ
WhatsApp Group Join Now
Telegram Group Join Now

ಚನ್ನಪಟ್ಟಣ, ಅಕ್ಟೋಬರ್ 24: ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.

ರೋಡ್‌ ಶೋ ವೇಳೆ ಹಿಂದೆ ನಿಂತಿದ್ದ ಸಿಪಿ ಯೋಗೇಶ್ವರ್‌ರನ್ನ ಗಮನಿಸಿದ ಸಿಎಂ ಮುಂದೆ ಕರೆದರು. ಈ ವೇಳೆ, ‘ಇರಲಿ ಪರವಾಗಿಲ್ಲ ನಿಲ್ಲಿ ಸರ್’ ಅಂತಾ ಯೋಗೇಶ್ವರ್ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article