ನಮ್ಮ ಪಕ್ಷದವರಲ್ಲಿ ಆಂತರಿಕ ಭಿನ್ನಮತದ ಕುದಿ: ಡಿ.ವಿ.ಸದಾನಂದಗೌಡ

Ravi Talawar
ನಮ್ಮ ಪಕ್ಷದವರಲ್ಲಿ ಆಂತರಿಕ ಭಿನ್ನಮತದ ಕುದಿ: ಡಿ.ವಿ.ಸದಾನಂದಗೌಡ
WhatsApp Group Join Now
Telegram Group Join Now

ಬೆಂಗಳೂರು: ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ಭಿನ್ನಮತ ಒಳಗೊಳಗೇ ಕುದಿಯುತ್ತಿದೆ. ಎಲ್ಲ ಸರಿ ಇದೆ ಎಂದು ಕಂಡರೂ, ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ ಇದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಸುದ್ದಿಗಾರ ಜತೆ ಮಾತನಾಡಿದ ಅವರು, ಯಾರನ್ನಾದರೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ತೊಂದರೆ ಇಲ್ಲ. ಆದರೆ ಕುತೂಹಲ ಹೆಚ್ಚಿಸುವ ಮೂಲಕ ಸಂಘಟನಾ ವೇಗಕ್ಕೆ ತಡೆ ಮಾಡುವುದು ಬೇಡ ಎಂದು ಪಕ್ಷದ ವರಿಷ್ಠರಿಗೆ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ.

ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಈ ಬಗ್ಗೆ ಒಬ್ಬೊಬ್ಬರು ಒಂದು ರೀತಿಯ ಹೇಳಿಕೆ ನೀಡದಂತೆ ವರಿಷ್ಠರು ಕಡಿವಾಣ ಹಾಕಬೇಕಾಗಿದೆ ಎಂದು ಹೇಳಿದರು.

ನಮ್ಮಲ್ಲಿ ಕೋರ್ ಕಮಿಟಿ ಇದ್ದರೂ ಕೇವಲ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಆಗಿದೆಯೇ ಹೊರತು ನಿಜವಾದ ಅರ್ಥದಲ್ಲಿ ವಿಷಯಾಧಾರಿತ ಚರ್ಚೆ ನಡೆಯುತ್ತಿಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಸಂಬಂಧ ಕೋರ್ ಕಮಿಟಿ ಸದಸ್ಯರು, ಪಕ್ಷ ಕಟ್ಟಿ ಬೆಳೆಸಿದವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು. ಆದರೆ, ಆ ಕೆಲಸ ಆಗುತ್ತಿಲ್ಲ ಎಂದು ಬೇಸರದಿಂದ ಹೇಳಿದರು.

WhatsApp Group Join Now
Telegram Group Join Now
Share This Article