ಮ್ಯಾಜಿಸ್ಟ್ರೇಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್​ಗೆ ದರ್ಶನ್ ಮೇಲ್ಮನವಿ

Ravi Talawar
ಮ್ಯಾಜಿಸ್ಟ್ರೇಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್​ಗೆ ದರ್ಶನ್ ಮೇಲ್ಮನವಿ
WhatsApp Group Join Now
Telegram Group Join Now

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಭೇದಿ, ಅತಿಸಾರ ಮತ್ತಿತ್ಯಾದಿ ಸಮಸ್ಯೆ ಉಂಟಾಗುತ್ತಿದೆ, ಜೊತೆಗೆ ದೇಹದ ತೂಕ ಇಳಿಕೆ ಆಗುತ್ತಿದೆ ಎಂದು ಅವರ ಪರ ವಕೀಲರು ಹೇಳಿದ್ದರು. ಹೀಗಾಗಿ ಅವರು ಮನೆ ಊಟ, ಬಟ್ಟೆಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಅರ್ಜಿಯನ್ನು ರಿಜೆಕ್ಟ್ ಮಾಡಿತ್ತು. ಈಗ ಮನೆ ಊಟ, ಬಟ್ಟೆ, ಹಾಸಿಗೆಗಾಗಿ ಮತ್ತೆ ಹೈಕೋರ್ಟ್​ಗೆ ನಟ ದರ್ಶನ್ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಮೊದಲು ಮನೆಯಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅನುಮತಿ ನಿರಾಕರಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ನಟ ದರ್ಶನ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಎದುರು ದರ್ಶನ್ ಅವರ ಪರ ವಕೀಲರು ಯಾವ ರೀತಿಯ ವಾದ ಮಂಡಿಸುತ್ತಾರೆ ಎಂಬುದನ್ನು ನೋಡಬೇಕಿದೆ.

 

WhatsApp Group Join Now
Telegram Group Join Now
Share This Article