ಸಂಕಷ್ಟದಿಂದ ಪಾರು ಮಾಡಲು ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ

Ravi Talawar
ಸಂಕಷ್ಟದಿಂದ ಪಾರು ಮಾಡಲು ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ
WhatsApp Group Join Now
Telegram Group Join Now

ಕೊಲ್ಲೂರು: ಸ್ಯಾಂಡಲ್ ವುಡ್ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ಜೈಲಿನ ಊಟ ಮತ್ತು ಸೌಲಭ್ಯ ಒಗ್ಗುತ್ತಿಲ್ಲ, ಮನೆಯೂಟ, ಹಾಸಿಗೆ ತರಿಸಲು ಅವಕಾಶ ಮಾಡಿಕೊಡಿ ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್  ವಜಾ ಮಾಡಿದೆ.

ಜೈಲು ಪಾಲಾಗಿರುವುದು ಕೇವಲ ದರ್ಶನ್ ಅವರಿಗಷ್ಟೇ ಅಲ್ಲದೆ ಅವರ ಪತ್ನಿ, ಮಗ, ತಾಯಿ ಮತ್ತು ಸೋದರ ದಿನಕರ್ ಗೆ ಕೂಡ ಅಪಾರ ಬೇಸರ, ಕಷ್ಟ ತಂದೊಡ್ಡಿದೆ. ಈ ಕಷ್ಟದಿಂದ ಆದಷ್ಟು ಬೇಗನೆ ಹೊರಬರಲು ಅವರ ಪತ್ನಿ ವಿಜಯಲಕ್ಷ್ಮೀ ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಪ್ರಖ್ಯಾತ ಕೊಲ್ಲೂರು ಮೂಕಾಂಬಿಕ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

 

WhatsApp Group Join Now
Telegram Group Join Now
Share This Article