ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆ; ಇಂದು ಸಾಂಪ್ರದಾಯಿಕವಾಗಿ ಪೂಜೆ

Ravi Talawar
ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆ; ಇಂದು ಸಾಂಪ್ರದಾಯಿಕವಾಗಿ ಪೂಜೆ
WhatsApp Group Join Now
Telegram Group Join Now

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕಾಡಿನಿಂದ ನಾಡಿಗೆ ಗಜಪಡೆಯನ್ನು ಸ್ವಾಗತಿಸುವ ಗಜಪಯಣ ಕಾರ್ಯಕ್ರಮಕ್ಕೆ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.

ವೀರನಹೊಸಳ್ಳಿ ಗ್ರಾಮದ ಬಳಿ ಮಧ್ಯಾಹ್ನ 12.34ರಿಂದ 12.59ರ ತುಲಾ ಲಗ್ನದಲ್ಲಿ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣ ಆರಂಭವಾಗಲಿದೆ.

ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ, 9 ಆನೆಗಳ ಮೊದಲ ತಂಡ ಅಭಿಮನ್ಯು ನೇತೃತ್ವದಲ್ಲಿ ಮೈಸೂರು ನಗರಕ್ಕೆ ಆಗಮಿಸಲಿದೆ. ಗಜಪಡೆಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸುವ ಕಾರ್ಯಕ್ರಮ ಇದಾಗಿದೆ.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Share This Article