ಅಶೋಕ್ ಎಂಜಿನಿಯರ್​ಗಳ ಕ್ಷಮೆ ಕೇಳಬೇಕೆಂದು ಡಿಸಿಎಂ ಮನವಿ

Ravi Talawar
ಅಶೋಕ್ ಎಂಜಿನಿಯರ್​ಗಳ ಕ್ಷಮೆ ಕೇಳಬೇಕೆಂದು ಡಿಸಿಎಂ ಮನವಿ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಂಜಿನಿಯರ್​​ಗಳನ್ನು ಮನೆಹಾಳರು ಎಂದು ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ವಿಧಾನಸಭೆಯಲ್ಲಿ ಜರಿದಿರುವುದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಂಡಿಸಿದ್ದಾರೆ. ಅಶೋಕ್ ಅವರು ಈ ಹೇಳಿಕೆ ಹಿಂಪಡೆದುಕೊಂಡು, ಎಂಜಿನಿಯರ್​ಗಳ ಕ್ಷಮೆ ಕೇಳಬೇಕೆಂದು ಡಿಸಿಎಂ ಮನವಿ ಮಾಡಿದ್ದಾರೆ.

ಸರ್ ಎಂ ವಿಶ್ವೇಶ್ವರಯ್ಯ ಅವರಿಂದ ಹಿಡಿದು ಈಗಿನವರವರೆಗೂ ರಾಜ್ಯದ ಪ್ರಗತಿಯಲ್ಲಿ ಇಂಜಿನಿಯರ್​ಗಳ ಕೊಡುಗೆ ಗಣನೀಯವಾದದ್ದು. ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಇಂಜಿನಿಯರ್​ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಇಲ್ಲದೆ ರಾಜ್ಯ ಮತ್ತು ದೇಶದ ಪ್ರಗತಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹ ಪ್ರಗತಿಯ ರೂವಾರಿಗಳನ್ನು ಮನೆಹಾಳರು ಎಂದು ಅಶೋಕ್ ಅವರು ಕರೆದಿರುವುದು ಸರಿಯಲ್ಲ ಎಂದು ಶಿವಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಂಜಿನಿಯರ್​​ಗಳ ಕುರಿತು ಹೇಳಿಕೆಗೆ ಅಶೋಕ್ ಅವರು ತಕ್ಷಣವೇ ಇಂಜಿನಿಯರ್​ಗಳ ಕ್ಷಮಾಪಣೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

 

WhatsApp Group Join Now
Telegram Group Join Now
Share This Article