ರಾಜ್ಯದಲ್ಲಿ 3 ಭ್ರೂಣಹತ್ಯೆ ಪ್ರಕರಣ ದಾಖಲು; 13 ಜನರ ಬಂಧನ: ದಿನೇಶ್ ಗುಂಡೂರಾವ್

Hasiru Kranti
ರಾಜ್ಯದಲ್ಲಿ 3 ಭ್ರೂಣಹತ್ಯೆ ಪ್ರಕರಣ ದಾಖಲು; 13 ಜನರ ಬಂಧನ: ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಬೆಳಗಾವಿ  ಡಿ.16 : ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಮೂರು ಭ್ರೂಣಹತ್ಯೆ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗಂಡೂರಾವ್ ತಿಳಿಸಿದರು.

ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಸಿ.ಟಿ.ರವಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರ ಗ್ರಾಮಾಂತರ ಜಿಲ್ಲೆಯ ಎಸ್ ಪಿ ಜಿ ಆಸ್ಪತ್ರೆಯ 6 ಜನರನ್ನು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ವಸತಿ ಗೃಹದ 6 ಜನರನ್ನು ಮತ್ತು ಬೆಂಗಳೂರ ನಗರ ಜಿಲ್ಲೆಯ ದ್ಯಾನಿμï ಪಾಲಿ ಕ್ಲಿನಿಕ್ ಆಸ್ಪತ್ರೆಯ ಒಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಗಳ ತನಿಖೆಯು ನ್ಯಾಯಾಲಯಗಳಲ್ಲಿ ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.

ಸೇವೆಯಿಂದ ಅಮಾನತು: ಈ ಹಿಂದೆ ಬೆಳಕಿಗೆ ಬಂದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮವಹಿಸಲಾಗಿದ್ದು, ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾಮೀಲಾಗಿರಬೇಕೆಂಬ ಹಿನ್ನೆಲೆಯಲ್ಲಿ ಡಾ.ಶಶಿ ಎಸ್.ಎಲ್., ರೇಡಿಯಾಲಜಿಸ್ಟ್ ಇವರನ್ನು ದಿನಾಂಕ: 03-09-2025ರಂದು ಸೇವೆಯಿಂದ ಅಮಾನತ್ತುಗೊಳಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

WhatsApp Group Join Now
Telegram Group Join Now
Share This Article