ತಾಯಿ, ಶಿಶು ಮರಣದಲ್ಲಿ ವೈದ್ಯರ ನಿರ್ಲಕ್ಷತನ ಕಂಡು ಬಂದರೆ ಶಿಸ್ತು ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಖಡಕ್ ಎಚ್ಚರಿಕೆ.

Ravi Talawar
ತಾಯಿ, ಶಿಶು ಮರಣದಲ್ಲಿ ವೈದ್ಯರ ನಿರ್ಲಕ್ಷತನ ಕಂಡು ಬಂದರೆ ಶಿಸ್ತು ಕಾನೂನು ಕ್ರಮ: ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಖಡಕ್ ಎಚ್ಚರಿಕೆ.
WhatsApp Group Join Now
Telegram Group Join Now

ವಿಜಯನಗರ (ಹೊಸಪೇಟೆ),  : ಜಿಲ್ಲೆಯ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ತಾಯಿ, ಶಿಶು ಮತ್ತು  ಮಕ್ಕಳ ಮರಣದಲ್ಲಿ ವೈದ್ಯರ ನಿರ್ಲಕ್ಷತನ ಬಗ್ಗೆ ವರದಿಯಾದರೇ ಅಂತಹ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ವೈದ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಡಿಟಿಎಫ್‌ಐ, ದಡಾರ ಮತ್ತು ರುಬೇಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೋಮವಾರ ಮಾತನಾಡಿದರು. ವೈದ್ಯರು ಶಸ್ತçಚಿಕಿತ್ಸೆ ಮಾಡುವ ವೇಳೆಯಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ರೀತಿಯಿಂದ ನಿರ್ಲಕ್ಷತನ ತೋರದೆ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು. ಒಂದೊAದು ಜೀವವು ಅಮೂಲ್ಯವಾಗಿದೆ ಆದ್ದರಿಂದ ರೋಗಿಗಳ ಬಗ್ಗೆ ವೈದ್ಯರು ವಿಶೇಷ ಕಾಳಜಿ ವಹಿಸಬೇಕಿದೆ. ಗರ್ಭಿಣಿ ಮತ್ತು ಬಾಣಂತಿಯರ ಸರಿಯಾದ ಸಮಯಕ್ಕೆ ತಪಾಸಣೆ ಮಾಡಿಸಬೇಕು ಹಾಗೂ  ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವನೆ ಶಿಫಾರಸು ಮಾಡಬೇಕು. ಆಯುಷ್ ಕೇಂದ್ರದಲ್ಲಿ ನಿಯಮಿತವಾಗಿ ಗರ್ಭಿಣಿಯರು ತಪಾಸಣೆ ಮತ್ತು ಲಸಿಕೆ, ಕಾಲ್ಸಿಯಂ ಮತ್ತು ಕಬ್ಬಿಣ ಅಂಶಯುಕ್ತ ಮಾತ್ರೆಗಳನ್ನು ನೀಡಬೇಕು. ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರು ಚಿಕಿತ್ಸೆಗೆ ಬಂದಾಗ ಕಡ್ಡಾಯವಾಗಿ ಇಸಿಜಿ ಪರೀಕ್ಷೆಯನ್ನು ಮಾಡಬೇಕು. ರುಬೆಲ್ಲಾ ರೋಗವು ಗರ್ಭಿಣಿಯರಲ್ಲಿ ಕಾಣಿಸಿಕೊಂಡಾಗ ಹುಟ್ಟುವ ಮಕ್ಕಳಲ್ಲಿ ಗ್ಲೂಕೋಮ, ಕಣ್ಣಿನ ಪೊರೆ, ಕಿವುಡುತನ, ಮೆದಳು ಜ್ವರ, ಮಾನಸಿಕ ಆಸ್ವಸ್ಥತೆ, ಬುದ್ಧಿ ಮಾಂದ್ಯತೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ವಿಶೇಷ ಗಮನ ಹರಿಸಿ ವೈದ್ಯರು ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು. ರಕ್ತದಾನ ಶಿಬಿರಗಳನ್ನು ಕಾಲೇಜುನಲ್ಲಿ  ಮತ್ತು ದಿನಾಚರಣೆಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ  ಆಯೋಜನೆ  ಮಾಡಬೇಕು. ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ರೋಗಗಳನ್ನು ತಡೆಯಲು ಸಾಧ್ಯವಾಗಿದೆ. ಆರೋಗ್ಯವಂತ ವ್ಯಕ್ತಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ಅಪಘಾತ ಮತ್ತು ಗರ್ಭಿಣಿಯರಿಗೆ ಸರಿಯಾದ ಸಮಯಕ್ಕೆ  ರಕ್ತದೊರೆಯದೆ ಚಿಕಿತ್ಸೆ ವಿಫಲವಾಗಿ ಮೃತಪಡುತ್ತಿದ್ದಾರೆ. ಇದನ್ನು ಮನಗಂಡು ಅಮೂಲ್ಯವಾದ ಜೀವ ಉಳಿಸಲು ಆರೋಗ್ಯವಂತರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ತಾಯಿ, ಶಿಶು ಮತ್ತು ಮಕ್ಕಳ ಮರಣದ ವರದಿಯ ಬಗ್ಗೆ ಪರಿಶೀಲನೆ ಮಾಡಿದರು. ದಡಾರ ಮತ್ತು ರುಬೇಲ್ಲಾ ಮುಕ್ತ ಜಿಲ್ಲೆಯನ್ನಾಗಿಸಲು ಜವಾಬ್ದಾರಿಯುತವಾಗಿ ವೈದ್ಯರು ಕಾರ್ಯನಿರ್ವಹಿಸಬೇಕಿದೆ ಎಂದರು.
ಈ ವೇಳೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್.ಎಲ್.ಆರ್, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ವೈದ್ಯಾಧಿಕಾರಿಗಳಾದ ಡಾ.ಹರಿಪ್ರಸಾದ್, ಡಾ.ಭಾಸ್ಕರ್, ಡಾ.ಷಣ್ಮುಖ ನಾಯ್ಕ, ಡಾ.ಸೋಮಶೇಖರ, ಡಾ.ಧರ್ಮನಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸುಭದ್ರ, ಸೇರಿದಂತೆ ವಿವಿಧ ತಾಲೂಕಿನ ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯರು ಭಾಗವಹಿಸಿದ್ದರು.

WhatsApp Group Join Now
Telegram Group Join Now
Share This Article