ಬಳ್ಳಾರಿಯಲ್ಲಿ ಪ್ರಖರ ಬಿಸಿಲು ಹಿನ್ನಲೆ ನಿರ್ಜಲೀಕರಣ ತಡೆಗಟ್ಟಲು ಓಆರ್‍ಎಸ್ ದ್ರಾವಣ ವಿತರಣೆ

Ravi Talawar
ಬಳ್ಳಾರಿಯಲ್ಲಿ ಪ್ರಖರ ಬಿಸಿಲು ಹಿನ್ನಲೆ ನಿರ್ಜಲೀಕರಣ ತಡೆಗಟ್ಟಲು ಓಆರ್‍ಎಸ್ ದ್ರಾವಣ ವಿತರಣೆ
WhatsApp Group Join Now
Telegram Group Join Now

ಬಳ್ಳಾರಿ,ಏ.05 ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಪ್ರಖರವಾದ ಬಿಸಿಲು ಕಂಡುಬರುತ್ತಿದ್ದು, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ತುರ್ತು ಚಿಕಿತ್ಸಾ ಕೇಂದ್ರಗಳಲ್ಲಿ ಓಆರ್‍ಎಸ್ ಜೀವಜಲವನ್ನು ಸಿದ್ದಪಡಿಸಿ ಪ್ರಮುಖ ಜಾತ್ರೆಗಳಲ್ಲಿ ಹಾಗೂ ಇತರೆಡೆ ಜನತೆಗೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದ್ದಾರೆ.

ಈಗಾಗಲೇ ಜಿಲ್ಲಾ ಕಾಲರಾ ತಂಡದಿಂದ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷಿಸಿ ಕುಡಿಯಲು ಯೋಗ್ಯವೆಂದು ಖಚಿತಪಡಿಸಿದ ನಂತರವೇ ಜಾತ್ರೆಯಲ್ಲಿ ಯಾವುದೇ ವಾಂತಿ, ಬೇಧಿ ಪ್ರಕರಣಗಳು ವರದಿಯಾಗದೇ ಇರುವುದು ಜಿಲ್ಲೆಗೆ ಸಮಾಧಾನಕರ ಅಂಶವಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಲೋಕಸಭಾ ಚುನಾವಣೆಯ ಕರ್ತವ್ಯದಲ್ಲಿರುವ ಚೆಕ್‍ಪೆÇೀಸ್ಟ್ ಸಿಬ್ಬಂದಿಯವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಓಆರ್‍ಎಸ್ ಪೆÇಟ್ಟಣಗಳನ್ನು ವಿತರಿಸಲಾಗಿದ್ದು, 1 ಲೀಟರ್ ನೀರಿಗೆ 1 ಪೆÇಟ್ಟಣದ ಸಂಪೂರ್ಣ ಪುಡಿಯನ್ನು ಹಾಕಿ 24 ಗಂಟೆಯೊಳಗಡೆ ಕುಡಿಯಲು ಬಳಸುವ ಮೂಲಕ ಬಿಸಿಲಿನ ಪ್ರಖರತೆಯಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಲು ಸಹಕಾರಿಯಾಗಿದೆ ಎಂದು ಡಿಹೆಚ್‍ಒ ಡಾ.ರಮೇಶ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯ ಅವಧಿಯಲ್ಲಿ ಮನೆಯ ಹೊರಗಡೆ ಕೆಲಸ ಮಾಡಲೇಬೇಕಾದ ಸಂದರ್ಭಗಳಲ್ಲಿ ಆದಷ್ಟು ನೆರಳಿನಲ್ಲಿಯೇ ಇರಬೇಕು. ಹೆಚ್ಚು ಗಾಳಿ, ಬೆಳಕು ಮತ್ತು ಕುಡಿಯಲು ಶುದ್ದವಾದ ನೀರು ಇರುವ ಕುರಿತು ನಿಗಾವಹಿಸಿ ಸಾರ್ವಜನಿಕರು ತಮ್ಮ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಬಿಸಿಲಿನ ತಾಪಮಾನ ಹೆಚ್ಚುತ್ತಲೇ ಇರುವುದರಿಂದ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಮನೆಯಿಂದ ಹೊರಗಡೆ ಬರದಂತೆ ಮನೆಯಲ್ಲಿಯೇ ಇರಲು ಆದ್ಯತೆ ನೀಡುವುದು. ತೀರಾ ಅಗತ್ಯವೆನಿಸುವ ಸಂದರ್ಭಗಳಲ್ಲಿ ಮನೆಯಿಂದ ಹೊರಗಡೆ ಬರುವಾಗ ಕುಡಿಯುವ ಶುದ್ದವಾದ ನೀರು, ಛತ್ರಿ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗುವಾಗ ಮಕ್ಕಳಿಗೆ ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕಬೇಕು. ಮುಖ್ಯವಾಗಿ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗದಂತೆ ಕಾಳಜಿವಹಿಸಬೇಕು ಎಂದು ತಿಳಿಸಿದರು.

*ಸಾಮಾನ್ಯ ಅಪಾಯದ ಚಿಹ್ನೆಗಳು:*

ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು ಕಂಡುಬರುತ್ತದೆ.

ಬಾಯಾರಿಕೆ ಇಲ್ಲದಿದ್ದರೂ ಅಗಾಗ್ಗೆ ಹೆಚ್ಚು ನೀರನ್ನು ಕುಡಿಯಬೇಕು. ಬಾಯಾರಿಕೆಯು ನಿರ್ಜಲಿಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‍ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನÀ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.

ಪ್ರಸ್ತುತ ಋತುಮಾನದ ನೀರಿನಾಂಶವಿರುವ  ಹಣ್ಣುಗಳನ್ನು ಸೇವನೆ ಮಾಡಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ, ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.

ಬಿಸಿಲಿನಲ್ಲಿ  ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು ಎಂದು ಅವರು ತಿಳಿಸಿದ್ದಾರೆ.

ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ಕೈಗಳನ್ನು ತೊಳೆದುಕೊಳ್ಳದೇ ಆಹಾರವನ್ನು ಸೇವಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‍ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್‍ಬಾಬು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article