ಬೆಂಗಳೂರು ಕಾಲ್ತುಳಿತ ಕೇಸ್‌: ಎಫ್‌ಐಆರ್‌ ರದ್ದು ಕೋರಿ ಡಿಎನ್ಎ, ಆರ್‌ಸಿಬಿ ಹೈಕೋರ್ಟ್‌ ಮೊರೆ

Ravi Talawar
ಬೆಂಗಳೂರು ಕಾಲ್ತುಳಿತ ಕೇಸ್‌: ಎಫ್‌ಐಆರ್‌ ರದ್ದು ಕೋರಿ ಡಿಎನ್ಎ, ಆರ್‌ಸಿಬಿ ಹೈಕೋರ್ಟ್‌ ಮೊರೆ
WhatsApp Group Join Now
Telegram Group Join Now

ಬೆಂಗಳೂರು, (ಜೂನ್ 09): ಬೆಂಗಳೂರಿನ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಡಿಎನ್ಎ ಎಂಟರ್​ಟೈನ್ಮೆಂಟ್ ನೆಟ್​ವರ್ಕ್ ಪ್ರೈವೇಟ್ ಲಿಮಿಟೆಡ್ ಮತ್ತು ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್​​ ಹೈಕೋರ್ಟ್​​ ಗೆ ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿವೆ. ಅದರಲ್ಲೂ ಡಿಎನ್ಎ ಎಂಟರ್​ಟೈನ್ಮೆಂಟ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂನ ಕಾರ್ಯಕ್ರಮದ ಪ್ಲ್ಯಾನ್ ಸರ್ಕಾರ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ನದ್ದು. ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಸರ್ಕಾರವೇ ಕರೆ ಕೊಟ್ಟಿತ್ತು ಎಂದು ರಿಟ್ ಅರ್ಜಿಯಲ್ಲಿ ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದೆ.

WhatsApp Group Join Now
Telegram Group Join Now
Share This Article