ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಡಾ. ಜಿ ಪರಮೇಶ್ವರ

Ravi Talawar
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ: ಡಾ. ಜಿ ಪರಮೇಶ್ವರ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ತಿಳಿಸಿದ್ದಾರೆ.

ಪ್ರಕರಣದ ತನಿಖೆ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯಿಂದ ಔಪಚಾರಿಕ ಮನವಿ ಬಂದ ನಂತರ ಸಿಬಿಐ ತನಿಖೆಗೆ ಹಸ್ತಾಂತರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯನ್ನು ಒಳಗೊಂಡ ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಪ್ರಕರಣ ಸಂಬಂಧ ಅಲ್ಲದೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು.

WhatsApp Group Join Now
Telegram Group Join Now
Share This Article