ರಾಮದುರ್ಗ: ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ತಾಲೂಕಿನ ಬಟಕುರ್ಕಿ ಗ್ರಾ.ಪಂ ವ್ಯಾಪ್ತಿಯ ನಾಗನೂರ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಮುಂದಾದರು.
ಸೂಪರಿಂಟೆಂಡಿಂಗ್ ಎಂಜಿನಿಯರ್ ಕಿರಣ್ ಘೋರ್ಪಡೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಮರ್ ನಾಯಕ್ ಎಸ್, ರಿಇತರ ಅಭಿಯಂತರರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ತಂಡ ನಾಗನೂರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಿದರು.
ಶಾಸಕ ಅಶೋಕ ಪಟ್ಟಣ ಅವರ ಸೂಚನೆಯ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ, ನಾಗನೂರಿನಲ್ಲಿ ಶೀಘ್ರದಲ್ಲೇ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.
ಗ್ರಾಮದಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಮಾಹಿತಿಯನ್ನು ಸಂಗ್ರಹಿಸಿ, ಅವುಗಳನ್ನು ತಕ್ಷಣವೇ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವದಾಗಿ ಹೇಳಿದರು.
ಅಲ್ಲದೇ ಗ್ರಾಮದಲ್ಲಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಯಾವುದೇ ವಿಳಂಬವಾಗದಂತೆ ಕಾರ್ಯನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಗ್ರಾಮಸ್ಥರು ಕೂಡ ಅಧಿಕಾರಿಗಳ ಈ ಭೇಟಿ ಹಾಗೂ ಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದು, ನೀರಿನ ಸಮಸ್ಯೆ ಬೇಗ ನಿವಾರಣೆ ಮಾಡಿ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಹಾಗೂ ಗ್ರಾಮದ ಅನೇಕ ಸಾರ್ವಜನಿಕರು ಉಪಸ್ಥಿತರಿದ್ದರು.
ನಾಗನೂರಿ ಗ್ರಾಮಕ್ಕೆ ಶೀಘ್ರದಲ್ಲೇ ಕುಡಿಯುವ ನೀರು ಪೂರೈಕೆ


