ಬಳ್ಳಾರಿ, ಮಾ.04:.. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ “ ಎಫ್ಸ್ಟಿಂಗ್ ಫೈಲ್ ಪ್ರಕರಣದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನ ಉಲ್ಲೇಖ ಹಾಗೂ 2017ರಲ್ಲಿ ನಡೆದ ಇಸ್ರೇಲ್ ಭೇಟಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಕೇಂದ್ರ ಸರ್ಕಾರ ದೇಶದ ನಾಗರಿಕರಿಂದ ಮುಚ್ಚಿಟ್ಟಿದೆ ಎಂದು ಆರೋಪಿಸಿ ಬಳ್ಳಾರಿ ಜಿಲ್ಲೆ ನಗರ ಮತ್ತು ಗ್ರಾಮೀಣ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದ ರಾಯಲ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಉಲ್ಲೇಖಿಸಲಾಗಿದೆ, ಇದು ದೇಶದ ಪ್ರಜಾಪ್ರಭುತ್ವ, ನೈತಿಕತೆ ಮತ್ತು ಪಾರದರ್ಶಕತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆರೋಪಿಸಿದರು.
ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಸ್ಪಷ್ಟನೆ ನೀಡದೇ ಮೌನ ವಹಿಸಿರುವುದು ಖಂಡನೀಯ ಎಂದ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ (ನಗರ) ಅಧ್ಯಕ್ಷ ಕೆ. ಶ್ರೀಕಾಂತ್, ದೇಶದ ಪ್ರಧಾನ ಮಂತ್ರಿಯ ಹೆಸರು ಅಂತರಾಷ್ಟ್ರೀಯ ಮಟ್ಟದ ಗಂಭೀರ ಹಗರಣದಲ್ಲಿ ಉಲ್ಲೇಖವಾಗಿರುವಾಗ ಕೇಂದ್ರ ಸರ್ಕಾರ ಮೌನ ವಹಿಸಿರುವುದು ಅಸಹ್ಯಕರ. ಇದು ಕೇವಲ ರಾಜಕೀಯ ವಿಚಾರವಲ್ಲ ದೇಶದ ಘನತೆ ಗೌರವ ಹಾಗೂ ಪ್ರಜಾಪ್ರಭುತ್ವದ ಪಾರದರ್ಶಕತೆಗೆ ಸಂಬಂಧಿಸಿದಂತೆ ದಕ್ಕೆ ತರುವಂತ ವಿಷಯವಾಗಿದೆ. ಮೋದಿ ಸರ್ಕಾರ ತಕ್ಷಣ ಜನತೆಗೆ ಸತ್ಯವನ್ನು ತಿಳಿಸಿ ನೈತಿಕ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ಮೌನದ ವಿರುದ್ಧ ಕಾಂಗ್ರೆಸ್ ಯುವ ಘಟಕ ಆಕ್ರೋಶವನ್ನು ವ್ಯಕ್ತಪಡಿಸಿದೆ.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಂದರ್ಭದಲ್ಲಿ ಮಂಜುನಾಥ್ ಬಳ್ಳಾರಿ ಗ್ರಾಮ ಅಧ್ಯಕ್ಷ ಕುಮಾರ್ ಸ್ವಾಮಿ ಬಸವರಾಜ್, ರುದ್ರಗೌಡ ಶಶಿಕುಮಾರ್ ಅಝರುದ್ದಿನ್, ಫಾರನ್ ಖಾನ್, ಖಾದರ್ ಫೈಝಲ್, ಅಬ್ದುಲ್ ಬರಿ, ಉಮೇಶ್ ಗೌಡ, ಗೋಪಾಲ್, ಬಸವರಾಜ್ ಸೇರಿದಂತೆ ಇತರೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ


