ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಹೊಸ ಕ್ರಮಕ್ಕೆ ಮುಂದಾಗಿದೆ. ಅತಿಯಾದ ಸಕ್ಕರೆ ಸೇವನೆಯು ಮಧುಮೇಹದ ಅಪಾಯವನ್ನು ಹೆಚ್ಚಿಸುವುದಲ್ಲದೆ, ಬೊಜ್ಜು, ದಂತ ಸಮಸ್ಯೆಗಳು ಮತ್ತು ಇತರ ಚಯಾಪಚಯ ಅಸ್ವಸ್ಥತೆಗಳಿಗೆ ಕಾರಣವಾಗುತ್ತದೆ, ಇದು ಅಂತಿಮವಾಗಿ ಮಕ್ಕಳ ದೀರ್ಘಕಾಲೀನ ಆರೋಗ್ಯ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.
ಮಕ್ಕಳಲ್ಲಿ ಟೈಪ್ 2 ಮಧುಮೇಹ, ಬೊಜ್ಜು ಮತ್ತು ಹಲ್ಲಿನ ಸಮಸ್ಯೆಗಳಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿತ್ತು. ಇದೀಗ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತನ್ನ ಎಲ್ಲಾ ಅಂಗಸಂಸ್ಥೆ ಶಾಲೆಗಳು ತಮ್ಮ ಕ್ಯಾಂಪಸ್ಗಳಲ್ಲಿ ಸಕ್ಕರೆ ಮಂಡಳಿ ಗಳನ್ನು ಸ್ಥಾಪಿಸಲು ಅಧಿಸೂಚನೆ ಹೊರಡಿಸಿದೆ.