ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನು ನಿರೀಕ್ಷೆ ಹುಸಿ: ನಿರಾಸೆಯಿಂದ ರೇವಣ್ಣ ಮನೆ ಕಡೆಗೆ

Ravi Talawar
ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಜಾಮೀನು ನಿರೀಕ್ಷೆ ಹುಸಿ: ನಿರಾಸೆಯಿಂದ ರೇವಣ್ಣ ಮನೆ ಕಡೆಗೆ
WhatsApp Group Join Now
Telegram Group Join Now

ಬೆಂಗಳೂರು, ಮೇ 17: ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ  ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮೇ 17 ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ​42ನೇ ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಕಳೆದ ಎರಡು ದಿನಗಳಿಂದ ಎಸ್​ಐಟಿ ಹಾಗೂ ರೇವಣ್ಣ ಪರ ವಕೀಲರಿಂದ ವಾದ-ಪ್ರತಿವಾದ ಆಲಿಸಿದ್ದು, ಇದೀಗ ಅಂತಿಮವಾಗಿ ಕೋರ್ಟ್​ ರೇವಣ್ಣ ಅವರ ಜಾಮೀನು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಇದರೊಂದಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.

ಮೇ 20ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ್ದರಿಂದ ಎಚ್​ಡಿ ರೇವಣ್ಣ ಅವರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಬೇಲ್​ ಸಿಗುತ್ತೋ ಇಲ್ವೋ ಎನ್ನುವ ಟೆನ್ಷನ್​ನಲ್ಲಿ ಮನೆಯತ್ತ ಹೆಜ್ಜೆ ಹಾಕಿದರು.

WhatsApp Group Join Now
Telegram Group Join Now
Share This Article