ಅಂಜಲಿ ಕುಟುಂಬದ ಶಿಕ್ಷಣದ ಜವಾಬ್ದಾರಿಯನ್ನು ಶಿರಹಟ್ಟಿಯ ಮಠ ನೋಡಿಕೊಳ್ಳುತ್ತದೆ: ಫಕೀರ ದಿಂಗಾಲೇಶ್ವರ ಮಹಾಸ್ವಾಮಿ

Ravi Talawar
ಅಂಜಲಿ ಕುಟುಂಬದ ಶಿಕ್ಷಣದ ಜವಾಬ್ದಾರಿಯನ್ನು ಶಿರಹಟ್ಟಿಯ ಮಠ ನೋಡಿಕೊಳ್ಳುತ್ತದೆ: ಫಕೀರ ದಿಂಗಾಲೇಶ್ವರ ಮಹಾಸ್ವಾಮಿ
WhatsApp Group Join Now
Telegram Group Join Now

ಹುಬ್ಬಳ್ಳಿ : ಅಂಜಲಿ ಅಂಬಿಗೇರ ಹತ್ಯೆ ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಹುಬ್ಬಳ್ಳಿಯಂತಹ ನಗರದಲ್ಲಿ ಬಡವರು ಹಾಗೂ ಶ್ರೀಮಂತರು ಬದುಕಲಾರದ ಸ್ಥಿತಿ ನಿರ್ಮಾಣವಾಗಿದೆ. ಅಂಜಲಿ ಕುಟುಂಬದ ಶಿಕ್ಷಣದ ಜವಾಬ್ದಾರಿಯನ್ನು ಶಿರಹಟ್ಟಿಯ ಮಠ ನೋಡಿಕೊಳ್ಳುತ್ತದೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.

ನಗರದಲ್ಲಿಂದು ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಅಜ್ಜಿ ಗಂಗಮ್ಮ ಪರಿಸ್ಥಿತಿ ಚಿಂತಾಜನಕವಾಗಿದೆ. ಅವರು 4 ಜನ ಹೆಣ್ಣುಮಕ್ಕಳನ್ನು ಕಟ್ಟಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಕುಟುಂಬದಲ್ಲಿ ಯಾವ ಪುರುಷರೂ ಇಲ್ಲ. ಹೆಣ್ಣುಮಕ್ಕಳಲ್ಲಿ ಇಬ್ಬರು ವಿದ್ಯಾಭ್ಯಾಸ ಹಾಗೂ ಕೆಲಸಕ್ಕೆ ಹೋಗುತ್ತಿದ್ದಾರೆ. ಸರ್ಕಾರ ಕುಟುಂಬಕ್ಕೆ ಸೂರು, ಶಿಕ್ಷಣಕ್ಕೆ ಧನ ಸಹಾಯವನ್ನು ಮಂಜೂರು ಮಾಡಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಇಲ್ಲಿಯವರೆಗೆ ಆರೋಪಿಯನ್ನು ಪೊಲೀಸ್ ಇಲಾಖೆ ಬಂಧನ ಮಾಡದೇ ಇರುವುದರಿಂದ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ.
ಈ ಹಿಂದೆಯೇ ಕುಟುಂಬ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರೂ ಕೂಡಾ ಪೊಲೀಸರು ಮೂಢನಂಬಿಕೆ ಎಂದು ಹೇಳಿ ಹಾರಿಕೆ ಉತ್ತರ ನೀಡಿ ಕಳುಹಿಸಿದ್ದಾರೆ. ಪೊಲೀಸ್ ಇಲಾಖೆ ಏನು ಕೆಲಸ ಮಾಡುತ್ತಿದೆ? ಎಂದು ಪ್ರಶ್ನಿಸಿದ ಶ್ರೀಗಳು, ಪೊಲೀಸ್ ಇಲಾಖೆ ಆ ದಿನವೇ ಅಂಜಲಿ ಕುಟುಂಬಕ್ಕೆ ಸ್ಪಂದಿಸಿ ಜಾಗೃತಿ ವಹಿಸಿದ್ದರೆ, ಇಂದು ಅಂಜಲಿ ಕೊಲೆಯಾಗುತ್ತಿರಲಿಲ್ಲ ಎಂದರು.

ಪ್ರೇಮ ಪ್ರಕರಣ ಎಂಬ ನೆಪವೊಡ್ಡಿ ಈ ರೀತಿಯಾಗಿ ಹೀನಾಯವಾಗಿ ಕೊಲೆ ಮಾಡಿದ್ದನ್ನು ನೋಡಿದರೆ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಸರ್ಕಾರ ಹಾಗೂ ನಾಯಕರು ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

WhatsApp Group Join Now
Telegram Group Join Now
Share This Article