ಜೂನ್ 13ರಂದು ಬಿಡಿಸಿಸಿಐನಿಂದ `ರೈತರ ಮೇಳ’

Ravi Talawar
ಜೂನ್ 13ರಂದು ಬಿಡಿಸಿಸಿಐನಿಂದ `ರೈತರ ಮೇಳ’
WhatsApp Group Join Now
Telegram Group Join Now

ಬಳ್ಳಾರಿ, ಜೂನ್. 11: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಜೂನ್ 13ರ ಶುಕ್ರವಾರ ಎಪಿಎಂಸಿ ಆವರಣದಲ್ಲಿ ಇರುವ ಚೇಂಬರ್ ಉಚಿತ ಆಸ್ಪತ್ರೆಯ ಮುಂಭಾಗದಲ್ಲಿ `ರೈತರ ಮೇಳ’ ಮೇಳ ನಡೆಯಲಿದೆ.

ಈ ಕುರಿತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಮತ್ತು ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಜೂನ್ 13ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮೇಳ ಪ್ರಾರಂಭವಾಗಲಿದೆ. ಶಾಸಕ ನಾರಾ ಭರತರೆಡ್ಡಿ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ.

ಶಾಸಕರಾದ ಬಿ. ನಾಗೇಂದ್ರ, ಜೆ.ಎನ್. ಗಣೇಶ್, ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್, ಜಿಲ್ಲಾಧಿಕಾರಿಗಳಾದ ಪ್ರಶಾಂತಕುಮಾರ್ ಮಿಶ್ರಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಂ. ಸೋಮಸುಂದರ್ ಮತ್ತು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಂತೋಷ್ ಸಪ್ಪಂಡಿ ಅವರು ಮುಖ್ಯ ಅತಿಥಿಗಳಾಗಿದ್ದಾರೆ. ರಾಯಚೂರು ಕೃಷಿ ವಿಶ್ವವಿದ್ಯಾಲಯದ ಡಾ. ಭೀಮಣ್ಣ ಮತ್ತು ಹೈದರಾಬಾದ್Àನ ಡಾ. ವೆಂಕಟೇಶ್ ಕುಲಕರ್ಣಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದಾರೆ.

ರೈತರ ಮೇಳದಲ್ಲಿ ಬಳ್ಳಾರಿ, ಚಿತ್ರದುರ್ಗ ಜಿಲ್ಲೆ ಸೇರಿ ನೆರೆಯ ಆಂದ್ರಪ್ರದೇಶ ಗಡಿ ಗ್ರಾಮಗಳ 3 ರಿಂದ 5 ಸಾವಿರ ರೈತರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಕೃಷಿ ಪರಿಕರಗಳು ಮತ್ತು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬಳ್ಳಾರಿ ಜಿಲ್ಲಾ ಕಾಟನ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಘಟಕ, ಬಳ್ಳಾರಿ ಎಪಿಎಂಸಿ ವರ್ತಕರ ಸಂಘ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಹತ್ತಿ ಬೆಳೆಗಾರರ ರೈತ ಸಮೂಹ ಸಹಕಾರ ನೀಡಿವೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article