ಮುಡಾ ಸಂಬಂಧ ಸಲ್ಲಿಕೆಯಾದ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ

Ravi Talawar
ಮುಡಾ ಸಂಬಂಧ ಸಲ್ಲಿಕೆಯಾದ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 19: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.

ಮೈಸೂರಿನ ಪಿಎಸ್ ನಳರಾಜ್ ಎಂಬವರು ದಿನಾಂಕ 27-08-2024 ರಂದು ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದ್ದು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿರುತ್ತಾರೆ. ಇದರಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಅನ್ನು ಉಲ್ಲಂಘಿಸಿ ಸಿಎಂ ಕ್ಷೇತ್ರವಾದ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ 387 ಕೋಟಿ ರೂ.ಗಳ ಕಾಮಗಾರಿ ಹಮ್ಮಿಕೊಂಡಿತ್ತು ಎಂದು ಉಲ್ಲೇಖಿಸಲಾಗಿದೆ.

ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಅಲ್ಲದೆ, ಈ ಮೂಲಕ ಪ್ರಾಧಿಕಾರ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಸಿಬಿಐನಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

WhatsApp Group Join Now
Telegram Group Join Now
Share This Article