ಬೆಳಗಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಪುನಶ್ಚೇತನ ಕಾರ್ಯದಿಂದ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ ಹಿರಿಯ ನ್ಯಾಯವಾದಿಗಳಾದ ಜಿ.ಆರ್ . ಸೂನೇರ್
ಅವರು ಹೇಳಿದರು.
ತಾಲೂಕಿನ ಅಂಬೇವಾಡಿ ಗ್ರಾ .ಪಂ ಗೋಜಗಾ ಗ್ರಾಮದ ಶ್ರೀ ಮಹಾ ಲಕ್ಮೇಶ್ವರ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಗೂ ಸರಕಾರಿ ಕೆರೆ ಅಭಿವೃದ್ಧಿ ಸಮಿತಿ ಗೋಜಗಾ ಸಂಯುಕ್ತ ಆಶ್ರಯದಲ್ಲಿ “೮೨೩ ನೇ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಕೆರೆ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆರೆಗಳು ಇದ್ದರೆ, ಜಲಮೂಲಗಳಲ್ಲಿ ನೀರಿನ ಹರಿವು ಹೆಚ್ಚಾಗಲಿವೆ. ಗ್ರಾಮೀಣ ಪ್ರದೇಶದ ಕೆರೆಗಳು ಪ್ರತಿಯೊಂದು ಊರಿನ ಸಮೃದ್ಧಿಯ ಪ್ರತೀಕವಾಗಿದೆ. ಗ್ರಾಮೀಣ ಜನ ಜೀವನವು ಸಂಪೂರ್ಣವಾಗಿ ಕೆರೆಗಳ ಮೇಲೆಯೆ ಅವಲಂಬಿತವಾಗಿದೆ. ನಾವು ಅವುಗಳನ್ನು ಕಾಪಾಡಿಕೊಂಡು ಹೋಗಬೇಕಿದೆ.
ಅಂತರ್ಜಲದ ಮುಖ್ಯ ಸೆಲೆಯಾಗಿದ್ದ ಈ ಕೆರೆಗಳು ಮಳೆಗಾಲದಲ್ಲಿಯೇ ನೀರು ತುಂಬದ ಮಟ್ಟಕ್ಕೆ ಬಂದಿವೆ. ಕೆರೆಗಳ ಇಂದಿನ ದುಃಸ್ಥಿತಿಗೆ ನೇರವಾಗಿ ಮಾನವನೇ ಹೊಣೆ ಹೊರತು ಬೇರೆ ಯಾರೂ ಅಲ್ಲ. ಹಾಗಾಗಿ ಇಂದು ಹೆಚ್ಚುತ್ತಿರುವ ನೀರಿನ ಬೇಡಿಕೆಗೆ ಕೆರೆಗಳನ್ನು ಪುನಃಶ್ಚೇತನಗೊಳಿಸದ ಹೊರತು ಬೇರೆ ಯಾವುದೇ ಮಾರ್ಗೋಪಾಯಗಳು ಇಲ್ಲವಾಗಿದೆ. ಹೀಗಾಗಿ ಅಂತರ್ಜಲ ಮಟ್ಟ ಕುಸಿತದ ಗಂಭೀರ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆ ಅವರು ಶಾಶ್ವತ ಪರಿಹಾರವೆಂಬಂತೆ ೨೦೧೬ರಲ್ಲಿ “ನಮ್ಮೂರು ನಮ್ಮ ಕೆರೆ’ ಯೋಜನೆ ಪ್ರಾರಂಭಿಸಿದ್ದು, ೮೨೩ ನೇ ನಮ್ಮೂರು ನಮ್ಮ ಕೆರೆ ಪುನಶ್ಚೇತನಗೊಳಿಸುವ ಕಾರ್ಯ ಯಶಸ್ವಿಯಾಗಿದೆ. ಗ್ರಾಮಸ್ಥರು ಕೆರೆಯನ್ನು ಸ್ವಚ್ವವಾಗಿ ನಿಭಾಯಿಸಿಕೊಂಡು ಹೋಗಬೇಕು ಎಂದರು.
ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ ಮಾತನಾಡಿ, ಕೆರೆ ನಮ್ಮ ಜೀವನಾಡಿ, ಗ್ರಾಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆಯ ಕೆರೆಯನ್ನು ಪುನಶ್ಚೇತನಗೊಳಿಸಲಾಗಿದೆ. ಮಹಿಳೆಯರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳಿಗೆ ಇದೆ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿಗಳಾದ ಜಿ.ಆರ್ . ಸೂನೇರ್, ತಾಪಂ ಇಓ ಯಶವಂತ ಅವರು ಕೆರೆ ಆವರಣದಲ್ಲಿ ಸಸಿ ನೇಡುವ ಮೂಲಕ ಕೆರೆಯ ಹಸ್ತಾಂತರ ಕಾರ್ಯವನ್ನು ನೇರವೆರಿಸಿದರು.
ಈ ಸಂದರ್ಭದಲ್ಲಿ ಕೆರೆ ಸಮಿತಿಯ ಅಧ್ಯಕ್ಷರು ಶಿವಾಜಿ ಯಾಳಗೆ, ಪಿಡಿಓ ಚಿದಾನಂದ, ಅಧ್ಯಕ್ಷೇ ಲಕ್ಷ್ಮಿ ಯಳಗುಕರ್ , ಚೇತನ್ ಪಾಟೀಲ್ , ರಾಜಶ್ರೀ , ದಯಾಶೀಲ, ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ, ನಿಂಗರಾಜ್ ,ಕೆರೆ ಸಮಿತಿಯ ಸರ್ವ ಸದಸ್ಯರು, ಕೃಷಿ ಮೇಲ್ವಿಚಾರಕ ನಾಗರಾಜ್, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಸ್ವಸಹಾಯ ಸಂಘಗಳ ಸದಸ್ಯರೂ ಗ್ರಾಮಪಂಚಾಯಿತಿ ಸರ್ವ ಸದಸ್ಯರು ಇತರರು ಇದ್ದರು. ಯೋಜನಾಧಿಕಾರಿಗಳು ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಸಂಗೀತಾ ನಿರೂಪಿಸಿ, ವಂದಿಸಿದರು.