ಬೆಂಗಳೂರು, ಆಗಸ್ಟ್ 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯನ್ನಾಗಿ ಬದಲಾಯಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಕಾರಣಾಂತರಗಳಿಂದ ಮುಂದೂಡುತ್ತಾ ಬರಲಾಗಿತ್ತು. ಆದರೆ ಇದೀಗ ಈ ವರ್ಷ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆ ಇಲ್ಲ ಎಂದು ಹೈಕೋರ್ಟ್ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಬಿಬಿಎಂಪಿ ಕಟ್ಟಡ ಬೈಲಾ ಉಲ್ಲಂಘನೆ ವಿಚಾರವಾಗಿ ನಡೆದ ವಿಚಾರಣೆ ವೇಳೆ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಯಾವಾಗ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಈ ವೇಳೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಐದು ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ. ಹಾಗಾಗಿ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮುಂದೂಡಲಾಗಿದೆ ಎಂದು ಹೈಕೋರ್ಟ್ಗೆ ಎಜಿ ಸ್ಪಷ್ಟನೆ ನೀಡಿದ್ದಾರೆ