ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್

Ravi Talawar
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್
WhatsApp Group Join Now
Telegram Group Join Now

ಹುಬ್ಬಳ್ಳಿ, ಸೆ.03: ವಿವಾದಿತ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಅನುಮತಿ ನೀಡಿದೆ. ಈ ಕುರಿತು ಹುಬ್ಬಳ್ಳಿಯ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದು, ಮೂರು ದಿನಗಳ ಕಾಲ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ.

ಇನ್ನು ಕಳೆದ ವರ್ಷ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಸುದ್ದಿಯಾಗಿತ್ತು. ಈ ವರ್ಷ ಪ್ರತಿಷ್ಠಾಪನೆಗೆ 4 ರಿಂದ 5 ಸಂಘಟನೆಗಳು ಅರ್ಜಿ ಸಲ್ಲಿಸಿತ್ತು. ಈ ಹಿನ್ನಲೆ ಪಾಲಿಕೆ ಕೆಲ ಷರತ್ತು ವಿಧಿಸಿ 3 ದಿನಗಳ ಕಾಲ ಅನುಮತಿ ನೀಡಿದೆ.

ಈ ಕುರಿತು ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಮೂರು ಸಾವಿರ ಮಠದ ಗುರು ಸಿದ್ದರಾಜಯೋಗಿಂದ್ರ ಸ್ವಾಮೀಜಿ, ‘ ನಂಬಿಕೆ ಆಧಾರದ ಮೇಲೆ ಗಣೇಶ ಉತ್ಸವ ಆಚರಣೆ ಮಾಡೋಣ. ಮೊದಲು ಮನುಷ್ಯ ಆಗಬೇಕು, ಆ ಮೇಲೆ ಹಿಂದೂ ಆಗಬೇಕು. ಮೊದಲು ಮಾನವ, ಆ ಮೇಲೆ ಮುಸ್ಲಿಂ, ಶಿಖ್ ಆಗಬೇಕು ಎಂದರು.
ನಾವೆಲ್ಲರೂ ಶಾಂತಿಯಿಂದ ಹಬ್ಬ ಮಾಡೋಣ. ಕಳೆದ ನಾಲ್ಕು ತಿಂಗಳ ಹಿಂದೆ ಹು-ಧಾ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇರಲಿಲ್ಲ. ಆ ಸಮಯದಲ್ಲಿ ‌ಹುಬ್ಬಳ್ಳಿ ಧಾರವಾಡಕ್ಕೆ ಕೆಟ್ಟ ಹೆಸರು ಬಂದಿತ್ತು. ಇದೀಗ ಹೊಸ ಪೊಲೀಸ್ ಕಮೀಷನರ್ ಒಳ್ಳೆ ಕೆಲಸ ಮಾಡುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.
WhatsApp Group Join Now
Telegram Group Join Now
Share This Article