ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ ಯಡಿಯೂರಪ್ಪ ವಿರುದ್ಧ ವಾಗ್ದಾಳಿ

Ravi Talawar
ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ ಯಡಿಯೂರಪ್ಪ ವಿರುದ್ಧ ವಾಗ್ದಾಳಿ
WhatsApp Group Join Now
Telegram Group Join Now

ಶಿವಮೊಗ್ಗ,ಏಪ್ರಿಲ್​ 12:   ರಾಜ್ಯ ಬಿಜೆಪಿ ಬಿ ಎಸ್ ಯಡಿಯೂರಪ್ಪ ಕುಟುಂಬದ ಮುಷ್ಠಿಯಲ್ಲಿದೆ ಎಂದು ಆರೋಪಿಸಿ ಮತ್ತು ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಇಂದು ಶುಕ್ರವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಜನ ಬೆಂಬಲದೊಂದಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡಿ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈ ರೀತಿ ಬೃಹತ್ ಸಂಖ್ಯೆಯಲ್ಲಿ ನಮಗೆ ಬೆಂಬಲಕ್ಕೆ ನಿಂತ ಮತದಾರರಿಗೆ ಧನ್ಯವಾದಗಳು, ಇಂದು ಎಲ್ಲಾ ಜಾತಿ, ಧರ್ಮದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಅವರೆಲ್ಲರ ಆಸೆ ನಾನು ಗೆಲ್ಲಬೇಕೆಂದು ಆಗಿದೆ ಎಂದರು.

WhatsApp Group Join Now
Telegram Group Join Now
Share This Article