ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆ; ರೆಡ್ ಅಲರ್ಟ್​ ಘೋಷಣೆ

Ravi Talawar
ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆ; ರೆಡ್ ಅಲರ್ಟ್​ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 25: ದಕ್ಷಿಣ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 31ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಹಾಸನ, ದಾವಣಗೆರೆ, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗೇರುಸೊಪ್ಪ, ಆಗುಂಬೆ, ಹೊನ್ನಾವರ, ಕಾರವಾರ,ಮಂಕಿ, ಶಿರಾಲಿ, ಸಿದ್ದಾಪುರ, ಕೋಟಾ, ಕ್ಯಾಸಲ್​ರಾಕ್, ಕುಮಟಾ, ಗೋಕರ್ಣ, ಕದ್ರಾ, ಮಂಗಳೂರು, ಶಕ್ತಿನಗರ, ಕುಂದಾಪುರ, ಮಂಗಳೂರು, ಕಾರ್ಕಳ, ಅಂಕೋಲಾ, ಮಾಣಿ, ಮೂಡುಬಿದಿರೆ, ಶೃಂಗೇರಿಯಲ್ಲಿ ಭಾರಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article