ಸೈಬರ್​ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ

Ravi Talawar
ಸೈಬರ್​ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ
WhatsApp Group Join Now
Telegram Group Join Now

ಬೆಂಗಳೂರು, ಜುಲೈ 20: ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್​ ವಂಚನೆ  ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ  ಸೈಬರ್​ ವಂಚನೆ ಅಧಿಕವಾಗಿದೆ. ನಗರದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಸೈಬರ್​ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್​ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ.

ಈ ಕುರಿತು ಟ್ವೀಟ್​ ಮಾಡಿದ ರಾಜ್ಯ ಪೊಲೀಸ್​ ಇಲಾಖೆ, “ಆತ್ಮೀಯ ಆನ್​ಲೈನ್​ ಬಳಕೆದಾರರೇ ಸೈಬರ್​ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್​ ಬಲೆಯಲ್ಲಿ ಸಿಲುಕಿದ್ದರೆ ಹತ್ತರಿದ ಪೊಲೀಸ್​ ಠಾಣೆಗೆ ದೂರು ನೀಡಿ. ಅಥವಾ ಸೈಬರ್​ ಕ್ರೈಂ ಸಹಾಯವಾಣಿ 1930 ಗೆ ಕರೆ ಮಾಡಿ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ ಖಾತೆಯಲ್ಲಿ ಟ್ವೀಟ್​​ ಮಾಡಿದ್ದಾರೆ.

ಶುಕ್ರವಾರ ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಜಾಗತಿಕವಾಗಿ ತಾಂತ್ರಿಕ ಬಿಕ್ಕಟ್ಟು ತಲೆದೋರಿತ್ತು. ಲಕ್ಷಾಂತರ ಜನರು ಬ್ಲೂ ಸ್ಕ್ರೀನ್ ಆಫ್ ಡೆತ್ (BSOD) ದೋಷವನ್ನು ಎದುರಿಸಿದ್ದರು. ಈ ಬ್ಲೂ ಸ್ಕ್ರೀನ್​ಲ್ಲೇ ರಾಜ್ಯ ಪೊಲೀಸ್​ ಇಲಾಖೆ ಸೈಬರ್​ ವಂಚಕರಿಂದ ಎಚ್ಚರ ವಹಿಸಿ ಎಂಬ ಸಂದೇಶ ಬರೆದು ಟ್ವೀಟ್​ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article