ಯೋಗ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿ : ಸಂಸದ ಕಡಾಡಿ

Pratibha Boi
ಯೋಗ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿ : ಸಂಸದ ಕಡಾಡಿ
Oplus_16777218
WhatsApp Group Join Now
Telegram Group Join Now

ಮೂಡಲಗಿ: ಯೋಗವು ಭಾರತ ದೇಶದಲ್ಲಿ ಮಾನವ ಶರೀರದ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿಯಾಗಿದ್ದು, ನಮ್ಮ ದೇಶ ಜಗತ್ತಿಗೆ ನೀಡಿದ ಬೆಲೆ ಕಟ್ಟಲಾಗದ ಒಂದು ಮಹಾನ ಕೊಡುಗೆ ಯೋಗಭ್ಯಾಸವಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು.
ಶನಿವಾರ ಜೂನ ೨೧ ರಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯು? ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ತಾಲೂಕಾಡಳಿತ ಮೂಡಲಗಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ ಶಿಕ್ಷಣ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭಾರತ ಸರ್ಕಾರದ ಹಸಿರು ಯೋಗ ಪರಿಕಲ್ಪನೆಯೊಂದಿಗೆ ೧೧ನೇ ಅಂ?ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ದೇಶ ಜಗತ್ತಿಗೆ ಸೊನ್ನೆ ಮತ್ತು ಆಯುರ್ವೇದಗಳಂತಹ ಅತಿ ದೊಡ್ಡ ಕೊಡುಗೆಗಳ ಜೊತೆಗೆ ಯೋಗವನ್ನು ಕೂಡಾ ನೀಡಿದೆ. ೫೦೦೦ ವರ್ಷಗಳಿಂದ ಭಾರತೀಯ ನೆಲದ ಋಷಿಮುನಿಗಳಿಂದ ಪ್ರಾರಂಭವಾದ ಯೋಗಾಭ್ಯಾಸವನ್ನು ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋದ ನಮ್ಮ ಜನರು ಮರತೇ ಬಿಟ್ಟಿದ್ದರು. ಆದರೆ ಕಳೆದ ೧೧ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಪರಿಶ್ರಮ ಮತ್ತು ಕಾಳಜಿಯ ಪರಿಣಾಮವಾಗಿ ಇಡಿ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಹಿರಿಮೆ ಭಾರತಕ್ಕಿದೆ ಎಂದರು. ಇದೇ ಸಂದರ್ಭದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಭಾರತ ಸರ್ಕಾರದ ಹಸಿರು ಯೋಗ ಪರಿಕಲ್ಪನೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲ್ಕರ, ನಿರ್ದೇಶಕರಾದ ವಿಜಯ ಸೋನವಾಲ್ಕರ, ಪ್ರಮುಖರಾದ ಶಿವಬಸು ಹಂದಿಗುಂದ, ನಿಂಗಪ್ಪ ಪಿರೋಜಿ, ಪ್ರಕಾಶ ಮಾದರ, ಕುಮಾರ ಗಿರಡ್ಡಿ, ಈಶ್ವರ ಮುರಗೋಡ, ಈರಪ್ಪ ಢವಳೇಶ್ವರ, ಸದಾಶಿವ ನೇರ್ಲಿ, ಶಿವಾನಂದ ಮಗದುಮ್ಮ, ಪ್ರಾಚಾರ್ಯರಾದ ಚಿತ್ರಗಾರ, ಮಹಾಂತೇಶ ಪಾಟೀಲ, ಮಲ್ಲಪ್ಪ ಕಂಕಣವಾಡಿ, ಸೇವಾ ಸಂಸ್ಥೆ ಅಧ್ಯಕ್ಷ ಪರಪ್ಪ ಗಿರೆಣ್ಣವರ, ಶ್ರೀಶೈಲ ಪೂಜೇರಿ, ಶ್ರೀಕಾಂತ ಕೌಜಲಗಿ, ಬಸವರಾಜ ಗಾಡವಿ ಸೇರಿದಂತೆ ಸ್ಥಳೀಯ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಯು? ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಫೋಟೋ ಫೈಲ್ ನೇಮ್ : ೨೧ ಮೂಡಲಗಿ ೧

 

 

 

WhatsApp Group Join Now
Telegram Group Join Now
Share This Article