ಮೈಸೂರು ವಿವಿ ರಿಜಿಸ್ಟ್ರಾರ್ ನೇಮಕ ಆದೇಶ ರದ್ದುಪಡಿಸಿದ ಹೈಕೋರ್ಟ್

Ravi Talawar
ಮೈಸೂರು ವಿವಿ ರಿಜಿಸ್ಟ್ರಾರ್ ನೇಮಕ ಆದೇಶ ರದ್ದುಪಡಿಸಿದ ಹೈಕೋರ್ಟ್
WhatsApp Group Join Now
Telegram Group Join Now

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ಕೆ.ಎಂ. ಮಹದೇವನ್ ಅವರ ಹುದ್ದೆಗೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಡಾ. ಕೆ.ಎಂ ಮಹದೇವನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡಸಿದ ನ್ಯಾಯಮೂರ್ತಿ ಬಿ. ಎಂ. ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಬಸಪ್ಪ ಅವರು ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಆಗಿ ನೇಮಕಗೊಳ್ಳಲು ಅರ್ಹತೆಯನ್ನು ಹೊಂದಿಲ್ಲ ಎಂಬುದಾಗಿ ವಿವಿಯ ಕುಲಪತಿ ನೀಡಿರುವ ಅಭಿಪ್ರಾಯವನ್ನು ಪರಿಗಣಿಸಿ ಈ ಆದೇಶ ಮಾಡಿರುವುದಾಗಿ ಪೀಠ ತಿಳಿಸಿದೆ.

ಸರ್ಕಾರದ ಸಾಮಾನ್ಯ ನೌಕರರ ಮಾದರಿಯಲ್ಲಿ ವಿಶ್ವವಿದ್ಯಾಲಯದ ಪದಾಧಿಕಾರಿಗಳನ್ನು ನೇಮಕ ಮಾಡುವುದು ಮತ್ತು ಹುದ್ದೆಯಿಂದ ತೆಗೆದುಹಾಕುವುದಕ್ಕೆ ಅವಕಾಶವಿಲ್ಲ. ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾಧಿಕಾರಿಗಳನ್ನು ಹಠಾತ್ ಹಾಗೂ ಅನೌಪಚಾರಿಕವಾಗಿ ತೆಗೆದು ಹಾಕಿದಾಗ ನ್ಯಾಯಾಲಯ ಮಧ್ಯಪ್ರವೇಶಕ್ಕೆ ಅವಕಾಶವಿರಲಿದೆ ಎಂದು ಪೀಠ ಹೇಳಿದೆ.

ನೇಮಕಾತಿಯು ಸಾರ್ವಜನಿಕ ಅಥವಾ ಆಡಳಿತಾತ್ಮಕ ಹಿತಾಸಕ್ತಿಗಳನ್ನು ಪೂರೈಸಿಲ್ಲ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಮುನ್ನ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಸಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

WhatsApp Group Join Now
Telegram Group Join Now
Share This Article