ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಶ್ರೀನಿವಾಸನ್ ನಿಧನ: ಹೆಚ್ ಎಂ ರೇವಣ್ಣ ಸಂತಾಪ

Ravi Talawar
ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಶ್ರೀನಿವಾಸನ್ ನಿಧನ: ಹೆಚ್ ಎಂ ರೇವಣ್ಣ ಸಂತಾಪ
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಜೆ.ಶ್ರೀನಿವಾಸನ್ ಮಂಗಳವಾರ ಮಧ್ಯಾಹ್ನ ೧೨.೩೦ಕ್ಕೆ ನಿಧನರಾಗಿದ್ದಾರೆ.ಈ ವಿಚಾರ ಗೊತ್ತಾಗಿ ದುಃಖವಾಗಿದೆ. ಶ್ರೀನಿವಾಸನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೇ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೂ ಭಗವಂತ ನೀಡಿಲಿ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸಂತಾಪ ಸೂಚಿಸಿದ್ದಾರೆ.

ಹಿಂದುಳಿದ ಜಾತಿಗಳ ಸಮಸ್ಯೆಗಳ ಕುರಿತಾಗಿ ಶ್ರೀನಿವಾಸನ್ ಅವರು ಅಪಾರ ಹೋರಾಟ, ಜಾಗೃತಿ ಕಾರ್ಯ ಕೈಗೊಳ್ಳುವುದರ ಮೂಲಕ ಸಮುದಾಯಗಳ ಏಳಿಗೆಗೆ ಕೊಡುಗೆ ನೀಡಿದ್ದಾರೆ. ಅವರ ಒಡನಾಟವು ನಮಗೆ ಅವಿಸ್ಮರಣೀಯ ಎಂದು ರೇವಣ್ಣ ಸ್ಮರಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article